ಹಿಜಾಬ್ ವಿಚಾರಣೆಗೆ ಹೈಕೋರ್ಟ್ ವಿಶೇಷ ಪೂರ್ಣ ಪೀಠ ರಚನೆ, ನಾಳೆ ಮಧ್ಯಾಹ್ನ ವಿಚಾರಣೆ

ಬೆಂಗಳೂರು: ಹಿಜಾಬ್ ವಿವಾದದ ವಿಚಾರಣೆಗೆ ಹೈಕೋರ್ಟ್ ನಿಂದ ವಿಶೇಷ ಪೂರ್ಣ ಪೀಠವನ್ನು ರಚಿಸಲಾಗಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ಮೂವರು ನ್ಯಾಯಮೂರ್ತಿಗಳ ಪೀಠವನ್ನು ರಚನೆ ಮಾಡಿದ್ದಾರೆ.

ಮುಖ್ಯ ನ್ಯಾಯಮೂರ್ತಿ ರಿತುರಾಜ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೋನ್ ಅವರ ಪೂರ್ಣ ಪೀಠವನ್ನು ರಚನೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2:30 ಕ್ಕೆ ಹಿಜಾಬ್ ವಿವಾದದ ಅರ್ಜಿ ವಿಚಾರಣೆ ನಡೆಯಲಿದೆ.

Leave a comment

Design a site like this with WordPress.com
Get started