ಫೆ.11: ಜಿಲ್ಲಾ ಬಿಜೆಪಿಯಿಂದ ಜಿಲ್ಲಾ ಮತ್ತು ಮಹಾ ಶಕ್ತಿಕೇಂದ್ರ ಮಟ್ಟದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಸಮರ್ಪಣಾ ದಿನಾಚರಣೆ

ಉಡುಪಿ: ಫೆ.11 ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾವಾದದ ಪ್ರವರ್ತಕ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಬಲಿದಾನದ ದಿನ. ಈ ಪ್ರಯುಕ್ತ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಫೆ.11 ಶುಕ್ರವಾರ ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಹಾಗೂ ಪ್ರಥಮ ಬಾರಿಗೆ ಎಲ್ಲಾ ಮಂಡಲಗಳ ವ್ಯಾಪ್ತಿಯ ಪ್ರತೀ ಮಹಾ ಶಕ್ತಿಕೇಂದ್ರಗಳಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ, ಪಕ್ಷದ ಚಟುವಟಿಕೆಗಳಿಗೆ ನಿಧಿ ಅರ್ಪಣೆ ಮೂಲಕ ಸಮರ್ಪಣಾ ದಿನಾಚರಣೆ ನಡೆಯಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ರಾಷ್ಟ್ರೀಯ, ರಾಜ್ಯ ಮತ್ತು ಜಿಲ್ಲಾ ಪ್ರಮುಖರು ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ, ಬೂತ್ ಮಟ್ಟದ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಮಹಾ ಶಕ್ತಿಕೇಂದ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ನಿಧಿ ಅರ್ಪಣೆಯ ಬಳಿಕ ಪಂಡಿತ್ ಜೀ ಯವರ ಜೀವನಾದರ್ಶದ ಬಗ್ಗೆ ಉಪನ್ಯಾಸ ನಡೆಯಲಿದೆ.

ಪಕ್ಷದ ಮುಖಂಡರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಕಾರ್ಯಕ್ರಮದಲ್ಲಿ ಬದ್ಧತೆಯಿಂದ ಭಾಗವಹಿಸಿ ಸಮರ್ಪಣಾ ದಿನಾಚರಣೆಯನ್ನು ಅತ್ಯಂತ ಯಶಸ್ವಿಗೊಳಿಸಬೇಕೆಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started