Design a site like this with WordPress.com
Get started

ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ, ಜವಾಬ್ದಾರಿ ಮಹತ್ವಪೂರ್ಣ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ‘ಸಶಕ್ತ ಬೂತ್ ಸದೃಢ ಪಕ್ಷ ಸಂಘಟನೆ’ ಪರಿಕಲ್ಪನೆಯಡಿ ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಪ್ರತೀ ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಪಕ್ಷದ ಪ್ರಮುಖರು ಮತ್ತು ವಿವಿಧ ಸ್ತರದ ಪದಾಧಿಕಾರಿಗಳು ವಿಸ್ತಾರಕರಾಗಿ ಸೇವೆ ಸಲ್ಲಿಸಲಿದ್ದಾರೆ. ಪಕ್ಷದ ಬೆಳವಣಿಗೆಯಲ್ಲಿ ವಿಸ್ತಾರಕರ ಕಾರ್ಯ ವ್ಯಾಪ್ತಿ ಮತ್ತು ಜವಾಬ್ದಾರಿ ಅತ್ಯಂತ ಮಹತ್ವಪೂರ್ಣ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಫೆ.16ರಂದು ಬೈಂದೂರು ವಿಧಾನಸಭಾ ಕ್ಷೇತ್ರದ ಹೆಮ್ಮಾಡಿಯ ಜಯಶ್ರೀ ಸಭಾಂಗಣದಲ್ಲಿ ನಡೆದ ಬಿಜೆಪಿ ಬೈಂದೂರು ಮತ್ತು ಕುಂದಾಪುರ ಮಂಡಲಗಳ ವ್ಯಾಪ್ತಿಯ ವಿಸ್ತಾರಕರ ಮಾಹಿತಿ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ, ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರೀಯ ಮತ್ತು ರಾಜ್ಯ ಬಿಜೆಪಿ ನಿರ್ದೇಶನದಂತೆ ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ವಿಸ್ತಾರಕ ಯೋಜನೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು. ಪ್ರತೀ ಶಕ್ತಿಕೇಂದ್ರದಲ್ಲಿ 3 ದಿನಗಳ ನಿವಾಸಿ ಪ್ರವಾಸದೊಂದಿಗೆ ಬೂತ್ ಸಶಕ್ತೀಕರಣ, ಬೂತ್ ಅಧ್ಯಕ್ಷರ ನಾಮ ಫಲಕ, ಪೇಜ್ ಪ್ರಮುಖ್, ಪಂಚರತ್ನ ಸಮಿತಿ, ಬೂತ್ ಸಮಿತಿಯನ್ನು ಗಮನಿಸಿ ಸಕ್ರಿಯಗೊಳಿಸುವುದು ಇವೇ ಮುಂತಾದ ನಿಗದಿತ ಕಾರ್ಯ ಚಟುವಟಿಕೆಗಳ ಮೂಲಕ ವಿಸ್ತಾರಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ವರದಿ ಸಲ್ಲಿಸಲಿದ್ದಾರೆ.

ರಾಷ್ಟ್ರೀಯ ಮತ್ತು ರಾಜ್ಯ ಬಿಜೆಪಿ ನಿರ್ದೇಶನದಂತೆ ಪಕ್ಷದ ಸಂಘಟನಾತ್ಮಕ ವಿಚಾರದಲ್ಲಿ ವಿಸ್ತಾರಕ ಯೋಜನೆಯನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಲಾಗುವುದು. ಪ್ರತೀ ಶಕ್ತಿಕೇಂದ್ರದಲ್ಲಿ 3 ದಿನಗಳ ನಿವಾಸಿ ಪ್ರವಾಸದೊಂದಿಗೆ ಬೂತ್ ಸಶಕ್ತೀಕರಣ, ಬೂತ್ ಅಧ್ಯಕ್ಷರ ನಾಮ ಫಲಕ, ಪೇಜ್ ಪ್ರಮುಖ್, ಪಂಚರತ್ನ ಸಮಿತಿ, ಬೂತ್ ಸಮಿತಿಯನ್ನು ಗಮನಿಸಿ ಸಕ್ರಿಯಗೊಳಿಸುವುದು ಇವೇ ಮುಂತಾದ ನಿಗದಿತ ಕಾರ್ಯ ಚಟುವಟಿಕೆಗಳ ಮೂಲಕ ವಿಸ್ತಾರಕರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿ ವರದಿ ಸಲ್ಲಿಸಲಿದ್ದಾರೆ.

ಆಯಾಯ ಶಕ್ತಿಕೇಂದ್ರಕ್ಕೆ ಸಂಬಂಧಪಟ್ಟಿರುವ ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳು, ಸಂಚಾಲಕರು, ಸಹ ಸಂಚಾಲಕರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳ ಸಹಕಾರದೊಂದಿಗೆ ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳನ್ನು ನಿಗದಿತ ಕಾಲ ಮಿತಿಯೊಳಗೆ ಬದ್ಧತೆಯಿಂದ ಕಾರ್ಯಗತಗೊಳಿಸುವ ಗುರುತರವಾದ ಹೊಣೆ ವಿಸ್ತಾರಕರ ಮೇಲಿದೆ ಎಂದು ಕುಯಿಲಾಡಿ ತಿಳಿಸಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಪ್ರಾಸ್ತಾವಿಕವಾಗಿ ಮಾತನಾಡಿದರು. ಬಿಜೆಪಿ ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ ವಿಸ್ತಾರಕರ ಕಾರ್ಯ ವ್ಯಾಪ್ತಿ ಮತ್ತು ಜವಾಬ್ದಾರಿಗಳ ವಿಸ್ತೃತ ಮಾಹಿತಿ ನೀಡಿದರು.
ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ, ಬಿಜೆಪಿ ಬೈಂದೂರು ಮಂಡಲ ಪ್ರಭಾರಿ ಕಿಶೋರ್ ಕುಮಾರ್ ಕುಂದಾಪುರ, ಬೈಂದೂರು ಮತ್ತು ಕುಂದಾಪುರ ಮಂಡಲಗಳ ವಿಸ್ತಾರಕರು ಹಾಗೂ ಮಂಡಲಗಳ ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಬಿಜೆಪಿ ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: