ಮಾ.10-11: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಕಾಲಾವಧಿ ನೇಮೋತ್ಸವ

ಉಡುಪಿ: ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ 14ನೇ ವರ್ಷದ ಪುನರ್ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಕಾಲಾವಧಿ ನೇಮೋತ್ಸವವು ಮಾ.10 ಮತ್ತು 11ರಂದು ನಡೆಯಲಿದೆ.

ಮಾ.10ರಂದು ಬೆಳಿಗ್ಗೆ 10.00ಕ್ಕೆ ಹಸಿರುವಾಣಿ ಗರೋಡಿ ಪ್ರವೇಶ ಹಾಗೂ ರಾತ್ರಿ 8.00ಕ್ಕೆ ಅಗೇಲ್ ಸೇವೆ ನಡೆಯಲಿದೆ. ಮಾ.11ರಂದು ಬೆಳಿಗ್ಗೆ 6.00ಕ್ಕೆ ಶ್ರೀ ಬೈದೇರುಗಳ ಮತ್ತು ಪರಿವಾರ ದೈವಗಳ ಪೂಜೆ, ಮಧ್ಯಾಹ್ನ 12.30ಕ್ಕೆ ಮಹಾ ಅನ್ನ ಸಂತರ್ಪಣೆ, ಸಂಜೆ 6.15ಕ್ಕೆ ಶ್ರೀ ಬೈದೇರುಗಳ ನೇಮೋತ್ಸವವು ಜರಗಲಿದ್ದು, ರಾತ್ರಿ 8.30ಕ್ಕೆ ಅನ್ನ ಸಂತರ್ಪಣೆ ಹಾಗೂ ರಾತ್ರಿ 11.30ಕ್ಕೆ ಶ್ರೀ ಬೈದೇರುಗಳ ದರುಶನ ಸೇವೆ ನಡೆಯಲಿದೆ ಎಂದು ಶ್ರೀ ಬ್ರಹ್ಮ ಬೈದೇರುಗಳ ಗರೋಡಿ ಕಲ್ಮಾಡಿ(ರಿ.) ಇದರ ಆಡಳಿತ ಸಮಿತಿಯ ಅಧ್ಯಕ್ಷ ಅಚ್ಯುತ ಅಮೀನ್ ಕಲ್ಮಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started