ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿಯವರಿಗೆ ಬಿಜೆಪಿ ಅಭಿನಂದನೆ

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿರುವ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಯುವ ನ್ಯಾಯವಾದಿ ಮನೋಹರ್ ಎಸ್. ಕಲ್ಮಾಡಿಯವರಿಗೆ ಬಿಜೆಪಿ ಉಡುಪಿ ಜಿಲ್ಲೆ ಮತ್ತು ಉಡುಪಿ ನಗರ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.

ಮಾ.14ರಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್ ಮತ್ತು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಭಿನಂದನಾ ಸಭೆಯಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ ಹಾಗೂ ಪ್ರಾಧಿಕಾರದ ಸದಸ್ಯರಾದ ಕಿಶೋರ್ ಕುಮಾರ್ ಕರಂಬಳ್ಳಿ, ಸುಮಾ ನಾಯ್ಕ್ , ಮಾಲತಿ ನಾಯಕ್, ಯೋಗೀಶ್ ಚಂದ್ರಾಧರ, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಪ್ರಭಾಕರ್ ಪೂಜಾರಿ ಇವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಅರ್. ನಾಯಕ್, ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಮಂಜುನಾಥ್ ಮಣಿಪಾಲ್, ದಿನೇಶ್ ಅಮೀನ್ ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started