ಹಿಜಾಬ್’ ಇಸ್ಲಾಂ ಅತ್ಯಗತ್ಯ ಭಾಗವಲ್ಲ – ‘ಹೈಕೋರ್ಟ್ ತ್ರಿಸದಸ್ಯ ಪೀಠ’ದಿಂದ ಮಹತ್ವದ ತೀರ್ಪು


ಬೆಂಗಳೂರು: ಹಿಜಾಬ್ ಇಸ್ಲಾಂ ಅತ್ಯಗತ್ಯ ಭಾಗವಲ್ಲ. ಸರ್ಕಾರದ ಆದೇಶ ಕಾನೂನು ಬದ್ಧವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವಂತಿಲ್ಲ ಎಂಬುದಾಗಿ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು ಐತಿಹಾಸಿಕ ತೀರ್ಪು ನೀಡಿ, ಹಿಜಾಬ್ ಧರಿಸಲು ಅನುಮತಿ ಕೋರಿದ್ದಂತಹ ರಿಟ್ ಅರ್ಜಿಗಳನ್ನು ವಜಾಗೊಳಿಸಿದೆ.

ಇಂದು ಫೆಬ್ರವರಿ 25ರಿಂದ 11 ದಿನಗಳ ವಾದ-ಪ್ರತಿವಾದ ಆಲಿಸಿದ್ದಂತ ಹೈಕೋರ್ಟ್ ತ್ರಿಸದಸ್ಯ ಪೂರ್ಣ ಪೀಠವು, ತನ್ನ ತೀರ್ಪನ್ನು ಪ್ರಕಟಿಸಿದೆ. ಸತತ 11 ದಿನ ವಾದ-ಪ್ರತಿವಾದ ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಆವಸ್ಥಿ, ನ್ಯಾಯಮೂರ್ತಿಗಳಾದ ಕೃಷ್ಣ ಎಸ್ ದೀಕ್ಷಿತ್, ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೀಠ, ಫೆಬ್ರವರಿ 25ರಂದು ವಿಚಾರಣೆ ಪೂರ್ಣಗೊಳಿಸಿ, ತೀರ್ಪು ಕಾಯ್ದಿರಿಸಿದ್ದಂತ ತೀರ್ಪನ್ನು, ಇಂದು ಪ್ರಕಟಿಸಿದ್ದು, ಹಿಜಾಬ್ ಇಸ್ಲಾಂ ಅತ್ಯಗತ್ಯಭಾಗವಲ್ಲ ಎಂಬುದಾಗಿ ಹೇಳುವ ಮೂಲಕ, ಹಿಜಾಬ್ ಕೋರಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಉಡುಪಿ ಕಾಲೇಜಿಗೆ ನಿರ್ಬಂಧ ಹೇರುವ ಅಗತ್ಯವಿಲ್ಲ ಎಂದು ತಿಳಿಸಿದೆ.

Leave a comment

Design a site like this with WordPress.com
Get started