Design a site like this with WordPress.com
Get started

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಾಗೂ ಅಂಬೇಡ್ಕರ್ ಜಯಂತಿ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಎ.6ರಂದು ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಜಿಲ್ಲೆಯ ಎಲ್ಲಾ 1,111 ಬೂತ್ ಗಳಲ್ಲಿ ಪಕ್ಷದ ಧ್ವಜಾರೋಹಣಗೈದು ಬಿಜೆಪಿಯ ಹುಟ್ಟು ಮತ್ತು ಬೆಳವಣಿಗೆಯ ಬಗ್ಗೆ ವಿಚಾರ ಸಂಕಿರಣವನ್ನು ಹಮ್ಮಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಬೇಕು ಹಾಗೂ ಎ.14ರಂದು ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ ಆಚರಣೆಯನ್ನು ಸೇವಾ ಕಾರ್ಯಗಳ ಮೂಲಕ ಯಶಸ್ವಿಗೊಳಿಸಬೇಕು ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನಿರ್ದೇಶನದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕರೆಯಂತೆ ಪಕ್ಷದ ಎಲ್ಲಾ ಕಾರ್ಯಕರ್ತರು ಎ.6ರಂದು ತಮ್ಮ ಮನೆಯ ಮೇಲೆ ಪಕ್ಷದ ಧ್ವಜಾರೋಹಣವನ್ನು ನೆರವೇರಿಸಿ ಅದರ ದೃಶ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಬೇಕು ಹಾಗೂ ಬೆಳಿಗ್ಗೆ 10.00 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಆಲಿಸಬೇಕು. ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಮಹಾ ಶಕ್ತಿಕೇಂದ್ರಗಳ ಉಸ್ತುವಾರಿಗಳು ಮತ್ತು ಸಂಚಾಲಕರು ಈ ಬಗ್ಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದರು.

ಎ.14ರಂದು ಅಂಬೇಡ್ಕರ್ ಜಯಂತಿಯ ಅಂಗವಾಗಿ ಜಿಲ್ಲೆಯ ಎಲ್ಲಾ ಬೂತ್ ಗಳಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ವ್ಯಕ್ತಿತ್ವ ಮತ್ತು ಕತೃತ್ವದ ಬಗ್ಗೆ ಹಾಗೂ ಅವರ ಜೀವನಕ್ಕೆ ಸಂಬಂಧಿಸಿರುವ ಪ್ರಮುಖ ಸ್ಥಳಗಳನ್ನು ಪಂಚತೀರ್ಥ ಎಂಬ ಹೆಸರಿನಲ್ಲಿ ಅಭಿವೃದ್ಧಿ ಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕೆಲಸ ಕಾರ್ಯಗಳ ಬಗ್ಗೆ ವಿಚಾರ ಗೋಷ್ಠಿಗಳನ್ನು ಆಯೋಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು.

ಪಕ್ಷದ ವಿಸ್ತಾರಕ ಯೋಜನೆಯಡಿ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆ ವೇಗ ಪಡೆದಿದೆ. ಚುನಾವಣೆಯ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ಸಶಕ್ತ ಬೂತ್ ನಿರ್ಮಾಣದ ಗುರಿಯೊಂದಿಗೆ ಮುಂಬರಲಿರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ವಿಜಯ ಪತಾಕೆಯನ್ನು ಬಾನೆತ್ತರಕ್ಕೇರಿಸಲು ಕಾರ್ಯಕರ್ತ ಬಂಧುಗಳು ಸರ್ವ ಸನ್ನದ್ಧರಾಗಬೇಕು ಎಂದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ಎಲ್ಲಾ ಚುನಾವಣೆಗಳನ್ನು ಸಂಘಟನಾ ಶಕ್ತಿಯಿಂದ ಎದುರಿಸಿ ದಾಖಲೆಯ ಗೆಲುವು ಸಾಧಿಸಿದೆ. ಪಕ್ಷದ ಸಂಘಟನಾತ್ಮಕ ಚಟುವಟಿಕೆಗಳು ನಿರಂತರವಾಗಿದ್ದು ನಿಗದಿತ ಯೋಜನೆಗಳನ್ನು ಸಕಾಲದಲ್ಲಿ ಪೂರ್ಣಗೊಳಿಸುವುದು ಅಗತ್ಯ. ಎಲ್ಲಾ ಬೂತ್ ಗಳಲ್ಲಿಯೂ ಸಮಾಜದ ಕಟ್ಟ ಕಡೆಯ ವ್ಯಕ್ತಿಯನ್ನು ತಲುಪಿದಾಗ ಪಕ್ಷದ ಸರ್ವ ಸ್ಪರ್ಶಿ ಸರ್ವ ವ್ಯಾಪಿ ಅಭಿಯಾನ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಒಂದಾಗಿ ಸಮನ್ವಯತೆಯಿಂದ ತೊಡಗಿಸಿಕೊಂಡು ಪಕ್ಷ ಸಂಘಟನೆಗೆ ವೇಗ ನೀಡುವ ಜೊತೆಗೆ ಮುಂಬರಲಿರುವ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿಯ ವಿಜಯ ಯಾತ್ರೆಯನ್ನು ಮುನ್ನಡೆಸಲು ಸನ್ನದ್ಧರಾಗಬೇಕು ಎಂದರು.

ಪಕ್ಷದ ವಿಸ್ತಾರಕ ಅಭಿಯಾನದ ಮಂಡಲ ಶಹ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.

Leave a Reply

Fill in your details below or click an icon to log in:

WordPress.com Logo

You are commenting using your WordPress.com account. Log Out /  Change )

Twitter picture

You are commenting using your Twitter account. Log Out /  Change )

Facebook photo

You are commenting using your Facebook account. Log Out /  Change )

Connecting to %s

%d bloggers like this: