
ಉಡುಪಿ: ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಬಿಜೆಪಿ ಹೆರ್ಗ ಮಹಾ ಶಕ್ತಿ ಕೇಂದ್ರದ ಸಭೆಯು ಮಹಾ ಶಕ್ತಿಕೇಂದ್ರದ ಸಂಚಾಲಕ ಹೇಮಂತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಎ.4ರಂದು ಕೆಳ ಪರ್ಕಳದಲ್ಲಿ ನಡೆಯಿತು.
ಬಿಜೆಪಿ ಜಿಲ್ಲಾ ಸಹ ವಕ್ತಾರ ಹಾಗೂ ಬಿಜೆಪಿ ಹೆರ್ಗ ಮಹಾ ಶಕ್ತಿಕೇಂದ್ರದ ಜಿಲ್ಲಾ ಉಸ್ತುವಾರಿ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಬಿಜೆಪಿ ಸ್ಥಾಪನಾ ದಿನಾಚರಣೆ ಮತ್ತು ಅಂಬೇಡ್ಕರ್ ಜಯಂತಿ ಆಚರಣೆ ಹಾಗೂ ಪಕ್ಷದ ವಿಸ್ತಾರಕ ಯೋಜನೆಯ ಹಿನ್ನೆಲೆಯಲ್ಲಿ ಸಶಕ್ತ ಬೂತ್ ನಿರ್ಮಾಣದ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಮಾಜಿ ನಗರಸಭಾ ಅಧ್ಯಕ್ಷ ದಿನಕರ ಶೆಟ್ಟಿ ಹೆರ್ಗ, ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ, ಕಲ್ಪನಾ ಸುಧಾಮ, ಹೆರ್ಗ ಮಹಾ ಶಕ್ತಿ ಕೇಂದ್ರದ ಸಹ ಸಂಚಾಲಕ ಶಿವಾನಂದ ಕಾಮತ್, ಪರ್ಕಳ ಶಕ್ತಿ ಕೇಂದ್ರದ ಅಧ್ಯಕ್ಷ ದುರ್ಗಾದಾಸ್ ರೈ, ಮಣಿಪಾಲ ಶಕ್ತಿ ಕೇಂದ್ರದ ಅಧ್ಯಕ್ಷ ನಟರಾಜ್ ಕಾಮತ್, ಬೂತ್ ಅಧ್ಯಕ್ಷರಾದ ಎಸ್.ರಮಾನಂದ ಸಾಮಂತ್, ಪ್ರಸನ್ನ ಶೆಟ್ಟಿ ಹೆರ್ಗ, ಜಗದೀಶ್ ಆಚಾರ್ಯ, ಸುರೇಶ್ ಕೇಳ್ಕರ್, ಸುಧೀರ್ ಶೆಟ್ಟಿಗಾರ್, ಗಿರೀಶ್, ಸುಧಾಮ ಪಿ., ಕಿರಣ್ ಬಿ.ಆರ್., ಬೂತ್ ಕಾರ್ಯದರ್ಶಿಗಳು, ಸಮಿತಿ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.