ಉಡುಪಿ: ಬಿಜೆಪಿ ಸ್ಥಾಪನಾ ದಿನಾಚರಣೆಯನ್ನು ಅಂಬಲಪಾಡಿ ಬೂತ್ ಸಂಖ್ಯೆ 178ರಲ್ಲಿ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ಮನೆಯಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಸಂಭ್ರಮದಿಂದ ಆಚರಿಸಲಾಯಿತು.
ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಪಕ್ಷದ ಹುಟ್ಟು ಬೆಳವಣಿಗೆ ಸಾಧನೆಗಳ ಬಗ್ಗೆ ಮಾಹಿತಿ ಹಂಚಿಕೊಂಡರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ರಾಜ್ ಪ್ರಕೋಷ್ಠ ಸಮಿತಿ ಸದಸ್ಯ ಹರೀಶ್ ಆಚಾರ್ಯ, ಅಂಬಲಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ ಶೆಟ್ಟಿ, ಮಹಾ ಶಕ್ತಿಕೇಂದ್ರದ ಯುವ ಮೋರ್ಚಾ ಉಪಾಧ್ಯಕ್ಷ ವಿನೋದ್ ಪೂಜಾರಿ, ಬೂತ್ ಪದಾಧಿಕಾರಿಗಳಾದ ಅನಿಲ್ ರಾಜ್ ಅಂಚನ್, ಸತೀಶ್ ರಾವ್, ಪ್ರವೀಣ್ ಕುಮಾರ್, ಅಣ್ಣು ಪದ್ಮನಾಭ ಜತ್ತನ್, ಪ್ರಕಾಶ್ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.