ಕಾಪು ಮಂಡಲ ರೈತ ಮೋರ್ಚಾ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ



ಕಾಪು: ಕಾಪು ಮಂಡಲ ರೈತ ಮೋರ್ಚ ದ ಕಾರ್ಯಕಾರಿಣಿ ಹಾಗೂ ಜಿಲ್ಲಾ ರೈತ ಮೋರ್ಚ ವತಿಯಿಂದ ಕಿಸಾನ್ ಸಮ್ಮಾನ್ ಮಾಹಿತಿ ಇನ್ನಂಜೆ ಪಂಚಾಯತ್ ವ್ಯಾಪ್ತಿಯ ಪಾಂಗಳ ಜನಾರ್ದನ ದೇವಸ್ಥಾನ ಬಳಿ ನಡೆಯಿತು.

ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಕಾಪು ಮಂಡಲ ರೈತಮೋರ್ಚ ಅಧ್ಯಕ್ಷರಾದ ಗುರುನಂದನ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ರೈತಮೋರ್ಚ ಅಧ್ಯಕ್ಷರಾದ ಪ್ರವೀಣ್ ಗುರ್ಮೆ, ಶಿವಕುಮಾರ್, ರಾಘವೇಂದ್ರ ಉಪ್ಪೂರು, ಮಲ್ಲಿಕಾ ಆಚಾರ್ಯ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕಿಸಾನ್ ಸಮ್ಮಾನ್ ಬಗ್ಗೆ ಮಾಹಿತಿ ಹಾಗೂ ತೋಟಗಾರಿಕಾ ಇಲಾಖೆ, ಕ್ರಷಿ ಇಲಾಖೆ ಯ ಸವಲತ್ತುಗಳ ಬಗ್ಗೆ ಮಾಹಿತಿ ನೀಡಲಾಯಿತು.

Leave a comment

Design a site like this with WordPress.com
Get started