ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಯೋಧರಿಗೆ ಸನ್ಮಾನ

ಕಾಪು: ಸ್ವಾತಂತ್ರ್ಯದ ಅಮ್ರತ ಮಹೋತ್ಸವ ಶುಭಸಂದರ್ಭದಲ್ಲಿ ಪಕ್ಷದ ಸೂಚನೆ ಮೇರೆಗೆ ಇಂದು ಕಾಪು‌ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಅಧ್ಯಕ್ಷರಾದ ಸಚಿನ್ ಸುವರ್ಣ ಇವರ ನೇತ್ರತ್ವದಲ್ಲಿ ಯೋಧರಿಗೆ ಸನ್ಮಾನ ಮಾಡುವ ಕಾರ್ಯಕ್ರಮ‌ ನಡೆಯಿತು.

ಕಾಪು ಪುರಸಭಾ ವ್ಯಾಪ್ತಿಯಲ್ಲಿ 4 ಜನ ಯೋಧರನ್ನು ಗುರುತಿಸಿ ಅವರ ಮನೆಗೆ ತೆರಳಿ ಗೌರವಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಹಿಂದುಳಿದ ವರ್ಗಗಳ ಮೋರ್ಚ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಕಾಪು‌ ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್, ಪುರಸಭಾ ಸದಸ್ಯರುಗಳಾದ ಅನಿಲ್ ಕುಮಾರ್ ಅರುಣ್ ಶೆಟ್ಟಿ, ಯುವಮೋರ್ಚ ಜಿಲ್ಲಾ ಹಾಗೂ ಮಂಡಲ ಪದಾಧಿಕಾರಿಗಳಾದ ಪ್ರವೀಣ್ ಕುಮಾರ್, ಯತೀಶ್ ಕೋಟ್ಯನ್, ಸೋನು ಪಾಂಗಳ,ಉದಯ್, ರಾಜ್, ವಿನಿಶ್, ಧೀರೇಶ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started