ಉಡುಪಿ ಜಿಲ್ಲಾ ಪ್ರವಾಸದಲ್ಲಿರುವ ಕೇಂದ್ರ ಸಚಿವೆಯರಾದ ನಿರ್ಮಲಾ ಸೀತಾರಾಮನ್ ಮತ್ತು ಶೋಭಾ ಕರಂದ್ಲಾಜೆಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಸ್ವಾಗತ

ಉಡುಪಿ: ಉಡುಪಿ ಶ್ರೀ ಕೃಷ್ಣ ಮಠ ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ಕ್ಷೇತ್ರ ದರ್ಶನ ಹಾಗೂ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 13ರಂದು ಉಡುಪಿಗೆ ಆಗಮಿಸಿರುವ ಮಾನ್ಯ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆಯವರನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರು ಮಣಿಪಾಲದಲ್ಲಿ‌ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ‌ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಪಕ್ಷದ ಹಿರಿಯ ಕಾರ್ಯಕರ್ತ ಬಾಲಕೃಷ್ಣ ಹೆಗ್ಡೆ ಆತ್ರಾಡಿ ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started