ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯನ್ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾ ಬಿಜೆಪಿ ಸಂಚಾಲಕರಾದ ಶಿಲ್ಪಾ ಜಿ‌ ಸುವರ್ಣ, ಮಂಡಲ ಸಂಚಾಲಕರಾದ ಮುರಳೀಧರ ಪೈ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರ್ ರತ್ನಾಕರ ಹೆಗ್ಡೆ, ನಿಕಟಪೂರ್ವ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕೇಸರಿ ಯುವರಾಜ್, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ಸಾಧಕರ ಗೌರವಾರ್ಪಣೆ ಮಂಡಲ ಸಂಚಾಲಕರಾದ ಗುರುಕ್ರಪಾ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸತೀಶ್ ಗುಡ್ಡೆಚ್ಚಿ ಕಾರ್ಯಕ್ರಮ ನಿರೂಪಿಸಿದರು. ಶಕುಂತಳಾ ಧನ್ಯವಾದ ಸಮರ್ಪಿಸಿದರು.

Leave a comment

Design a site like this with WordPress.com
Get started