ಜೂ.20 ಬೆಳಿಗ್ಗೆ ಗಂಟೆ 10.30ಕ್ಕೆ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಹಿರಿಯ ಮುಖಂಡ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆ

ಕರಾವಳಿ‌‌ ಕರ್ನಾಟಕದ ರಾಜಕೀಯ ಬೀಷ್ಮರೆಂದೇ ಖ್ಯಾತರಾಗಿದ್ದ ‌ಬಿಜೆಪಿ ಹಿರಿಯ‌ ಮುಖಂಡ, ಉಡುಪಿ ಜಿಲ್ಲಾ ಬಿಜೆಪಿ ಪ್ರಥಮ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಹಾಗೂ 3ನೇ ಹಣಕಾಸು ಆಯೋಗದ ಮಾಜಿ ಅಧ್ಯಕ್ಷ ಎ.ಜಿ. ಕೊಡ್ಗಿಯವರ ಶೃದ್ಧಾಂಜಲಿ ಸಭೆಯು ಜೂ.20ರಂದು ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಜಿಲ್ಲೆಯ ಸಚಿವರು ಮತ್ತು ಶಾಸಕರ ಉಪಸ್ಥಿತಿಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.

ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಮತ್ತು ಸಂಚಾಲಕರ ಸಹಿತ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಭಾಗವಹಿಸಲಿದ್ದಾರೆ.

Leave a comment

Design a site like this with WordPress.com
Get started