Design a site like this with WordPress.com
Get started

ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ

ಉಡುಪಿ: ಕರ್ನಾಟಕ ಸರಕಾರದ ಸ್ವಾಮ್ಯದ 77 ವರ್ಷಗಳ ಇತಿಹಾಸವಿರುವ ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್ ಇದರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣ ಸಮಾರಂಭವು ಬೆಂಗಳೂರು ಯಶವಂತಪುರದ ಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನಡೆಯಿತು. ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡ ಜಲಸಾರಿಗೆ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ರವರು ಕೆ.ಉದಯ ಕುಮಾರ್ ಶೆಟ್ಟಿಯವರ ಪದಗ್ರಹಣವನ್ನು ನೆರವೇರಿಸಿ, ಅಭಿನಂದಿಸಿ ಮಾತನಾಡಿದರು. ಸಂಸ್ಥೆಯ ನೂತನ ಅಧ್ಯಕ್ಷರಾಗಿ ಜಬಾಬ್ದಾರಿContinue reading “ದಿ ಮೈಸೂರ್ ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮೆಟೆಡ್ ನೂತನ ಅಧ್ಯಕ್ಷರಾಗಿ ಕೆ.ಉದಯ ಕುಮಾರ್ ಶೆಟ್ಟಿ ಪದಗ್ರಹಣ”

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ

ಉಡುಪಿ: ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಅಂಗವಾಗಿ “ಹರ್ ಘರ್ ತಿರಂಗಾ” ಅಭಿಯಾನದಡಿ ಬಿಜೆಪಿ ಜಿಲ್ಲಾ ಮಾಧ್ಯಮ ವಿಭಾಗದ ವತಿಯಿಂದ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿಯವರಿಗೆ ಉಡುಪಿ ಜಿಲ್ಲಾ ಪ್ರೆಸ್ ಕ್ಲಬ್ ನಲ್ಲಿ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಲಾಯಿತು. ಅಗಸ್ಟ್ 13ರ ಬೆಳಿಗ್ಗೆಯಿಂದ ಅಗಸ್ಟ್ 15ರ ಸಂಜೆಯ ವರೆಗೆ ಸಮಸ್ತ ಜನತೆ ತಮ್ಮ ಮನೆಯ ಮೇಲೆ ಸಂಭ್ರಮದಿಂದ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಪ್ರಚಾರ ಮೂಲಕ ಜಾಗೃತಿ ಮೂಡಿಸುವಂತೆ ದೃಶ್ಯ ಮತ್ತು ಮುದ್ರಣ ಮಾಧ್ಯಮದContinue reading “ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಜಿಲ್ಲಾ ಬಿಜೆಪಿಯಿಂದ ರಾಷ್ಟ್ರ ಧ್ವಜ ಹಸ್ತಾಂತರ”