ಸಿ.ಸಿ.ಎ.ಆರ್.ಐ. ಗೋವಾ ಇದರ ಇನ್ಸ್ಟಿಟ್ಯೂಟ್ ಮ್ಯಾನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಅಂಬಲಪಾಡಿ ಬಿಲ್ಲವ ಸೇವಾ ಸಂಘದಿಂದ ಸನ್ಮಾನ


ಉಡುಪಿ: ಕೇಂದ್ರ ಸರಕಾರದ ಸ್ವಾಮ್ಯದ ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ (ಸಿ.ಸಿ.ಎ.ಆರ್.ಐ) ಗೋವಾ ಇದರ ಆಡಳಿತ ಸಮಿತಿಯ ಸದಸ್ಯರಾಗಿ ಭಾರತೀಯ ಕೃಷಿ ಸಂಶೋಧನಾ ಪರಿಷತ್ ನಿಂದ ನಾಮ ನಿರ್ದೇಶನಗೊಂಡಿರುವ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಲ್ಲವಾ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಗೋಪಾಲ್ ಸಿ ಬಂಗೇರ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಹಿರಿಯಡ್ಕ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ನಳಿನಾದೇವಿ, ವಿಜಯಲಕ್ಷ್ಮಿ ಶಿವಕುಮಾರ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಆಡಳಿತ ಸಮಿತಿಯ ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಸಮಿತಿ ಸದಸ್ಯರಾದ ಎ.ಮುದ್ದಣ್ಣ ಪೂಜಾರಿ, ಶಿವದಾಸ್ ಪಿ., ರಮೇಶ್ ಕೋಟ್ಯಾನ್, ಶಿವಾಜಿ ಸನಿಲ್, ಗುರುರಾಜ್, ಸತೀಶ್ ಜಿ. ಪೂಜಾರಿ, ಭಾಸ್ಕರ್ ಕೋಟ್ಯಾನ್, ವಿನಯ್ ಕುಮಾರ್, ಶಶಿಕಾಂತ್, ನಿತಿನ್ ಕುಮಾರ್, ಮಹಿಳಾ ಘಟಕದ ಸಹ ಸಂಚಾಲಕಿಯರಾದ ಗೋದಾವರಿ ಎಮ್. ಸುವರ್ಣ, ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ಜಯಂತಿ ಹರೀಶ್, ಜತೆ ಕಾರ್ಯದರ್ಶಿಗಳಾದ ಸವಿತಾ ಸಂತೋಷ್, ಪ್ರಭಾ ದಯಾನಂದ್, ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಸದಸ್ಯೆಯರಾದ ಅಶ್ವಿನಿ, ಸೌಮ್ಯ, ಲಾವಣ್ಯ, ರೋಶನಿ, ಶಿಫಾಲಿ ಹಾಗೂ ಸಂಘದ ಮತ್ತು ಮಹಿಳಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started