

ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶ್ರೀ ವಿ. ಸುನೀಲ್ ಕುಮಾರ್ ರವರು ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವದ 4ನೇ ದಿನದ ಮಹಾಪೂಜೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುನಿಲ್ ಕುಮಾರ್ ಕಪ್ಪೆಟ್ಟು, ಉಪಾಧ್ಯಕ್ಷ ರವೀಶ್ ಪೂಜಾರಿ ಕಪ್ಪೆಟ್ಟು, ಕೋಶಾಧಿಕಾರಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಕೇಂದ್ರ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆಯ ಆಡಳಿತ ಸಮಿತಿ ಸದಸ್ಯ ಶಿವಕುಮಾರ್ ಅಂಬಲಪಾಡಿ, ಗಣೇಶೋತ್ಸವ ಕಾರ್ಯಕಾರಿ ಸಮಿತಿ ಸದಸ್ಯರಾದ ಸೂರ್ಯಕಾಂತ್ ಅಂಬಲಪಾಡಿ, ಶ್ರೇಯಸ್ ಸಿ. ಶೆಣೈ, ಪ್ರಶಾಂತ್, ಭರತ್, ನಾಗೇಶ್, ದಯಾನಂದ್ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು.