
ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಸೆ.17 ರಿಂದ ಅ. 2 ಗಾಂಧಿಜಯಂತಿ ಯ ತನಕ ಸುಮಾರು 15 ದಿನಗಳ ಕಾಲ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನಡೆಸುವ ಕುರಿತಂತೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪಕ್ಷ ಕೊಟ್ಟ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿ ಪ್ರತೀ ಶಕ್ತಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಸೇವಾ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಮಾಹಿತಿ ನೀಡಿದೆನು. ವಿಶೇಷವಾಗಿ ಸ್ಬಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಕೆರೆಗಳ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರ ಇತ್ಯಾದಿ ಕಾರ್ಯಕ್ರಮ ನಡೆಸುವ ಬಗ್ಗೆ ರೂಪುರೇಷೆ ಕೈಗೊಳ್ಳಲಾಯಿತು.
ಉಡುಪಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಿಲ್ಲಾ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸುರೇಂದ್ರ ಪಣಿಯೂರು, ಜಿಲ್ಲಾ ಸಹಕಾರಿ ಪ್ರಕೋಷ್ಠ ಸಂಚಾಲಕರಾದ ಮುರಳೀಧರ ಪೈ, ಮಂಡಲ ಮೋರ್ಚಗಳ ಅಧ್ಯಕ್ಷರುಗಳಾದ ಸಚಿನ್ ಸುವರ್ಣ, ಸಂತೋಷ್ ಮೂಡುಬೆಳ್ಳೆ, ಗುರುನಂದನ್ ನಾಯಕ್, ಸುಮಾಶೆಟ್ಟಿ, ಮಂಡಲ ಉಪಾಧ್ಯಕ್ಷರಾದ ಪವಿತ್ರ ಶೆಟ್ಟಿ, ಚಂದ್ರಶೇಖರ ಕೋಟ್ಯನ್, ಸಂಧ್ಯಾ ಕಾಮತ್, ಸುಭಾಷ್ ನಾಯ್ಕ್, ಸುಧಾಮ ಶೆಟ್ಟಿ, ಮಂಡಲ ಕಾರ್ಯದರ್ಶಿಗಳಾದ ಚಂದ್ರ ಮಲ್ಲಾರ್, ರಾಜೇಶ್ ಕುಂದರ್, ಕಾಪು ಪುರಸಭಾ ಸದಸ್ಯರುಗಳಾದ ಅರುಣ್ ಶೆಟ್ಟಿ, ಅನಿಲ್ ಕುಮಾರ್, ಸರಿತಾ ಪೂಜಾರಿ ಮಹಾಶಕ್ತಿಕೇಂದ್ರ ಅಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.