News By: ಜನತಾಲೋಕವಾಣಿನ್ಯೂಸ್ ಆರ್.ಎಸ್.ಎಸ್. ಕಚೇರಿಗೆ ಮುತ್ತಿಗೆ ಯತ್ನ ಖಂಡನೀಯ ಉಡುಪಿ: ಇಲ್ಲಿನ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್.ಎಸ್.ಎಸ್.)ದ ಕಚೇರಿಗೆ ಪಿ.ಎಫ್.ಐ ಕಾರ್ಯಕರ್ತರು ಮುತ್ತಿಗೆ ಹಾಕಲು ಪ್ರಯತ್ನಿಸಿರುವುದು ಖಂಡನೀಯ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ ನಾಯಕ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಎನ್.ಐಎ ಅಧಿಕಾರಿಗಳು ದೇಶಾದ್ಯಂತ ತಪ್ಪಿತಸ್ಥರಾದ ಪಿ.ಎಫ್.ಐ ಮತ್ತು ಎಸ್.ಡಿ.ಪಿ.ಐ ಕಚೇರಿ ಮೇಲೆ ದಾಳಿ ನಡೆಸಿದಾಗ ಉಡುಪಿಯಲ್ಲಿ ಕೆಲವು ಕಿಡಿಗೇಡಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ್ದಾರೆ. ಅಂಥವರನ್ನು ಹದ್ದುಬಸ್ತಿನಲ್ಲಿಟ್ಟು ಮಟ್ಟಹಾಕಲುContinue reading “ಆರ್.ಎಸ್.ಎಸ್. ಕಚೇರಿಗೆ ಮುತ್ತಿಗೆ ಯತ್ನ ಖಂಡನೀಯ”
Monthly Archives: September 2022
ಸೆ.24-25 : ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗವು ಸೆ.24 ಮತ್ತು ಸೆ.25ರಂದು ಉಡುಪಿ ಮಥುರಾ ಕಾಂಫರ್ಟ್ಸ್ ಸಭಾಂಗಣದಲ್ಲಿ ಜರಗಲಿದೆ. ಸೆ.24ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಇಂದನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣದ ಉದ್ಘಾಟನೆಯನ್ನು ನೆರವೇರಿಸುವರು. ಸೆ.25ರ ಸಂಜೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಸೆ.24-25 : ಬಿಜೆಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ಪ್ರಶಿಕ್ಷಣ ವರ್ಗ”
ತಾಂಟುವವರ’ ಹುಟ್ಟಡಗಿಸಿದ ಪೋಲಿಸ್ ಇಲಾಖೆ; ಪಿಎಫ್ಐ, ಎಸ್ಡಿಪಿಐಗೆ ಮರ್ಮಾಘಾತ ನೀಡಿದ ಎನ್ಐಎ ಐತಿಹಾಸಿಕ ದಾಳಿ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದ 10 ರಾಜ್ಯಗಳಲ್ಲಿ ಐತಿಹಾಸಿಕ ಮಿಂಚಿನ ದಾಳಿ ನಡೆಸಿ ಪಿಎಫ್ಐ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್ಐ ನಾಯಕರನ್ನು ಬಂದಿಸಿರುವ ದಿಟ್ಟ ಕ್ರಮ ಹಾಗೂ ದಾಳಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಕಾಪು ಮತ್ತು ಉಡುಪಿ ನಗರದಲ್ಲಿ ‘ತಾಂಟುವ’ ಮನಸ್ಥಿತಿಯನ್ನು ಹೊಂದಿರುವ ಕಿಡಿಗೇಡಿಗಳ ರಸ್ತೆ ತಡೆಯನ್ನು ವಿಫಲಗೊಳಿಸಿ ಮತಾಂಧ ಸಮಾಜಘಾತುಕ ದುಷ್ಟ ಶಕ್ತಿಗಳ ಹುಟ್ಟಡಗಿಸಿರುವ ಜಿಲ್ಲಾ ಪೋಲಿಸ್ ಇಲಾಖೆಯContinue reading “ತಾಂಟುವವರ’ ಹುಟ್ಟಡಗಿಸಿದ ಪೋಲಿಸ್ ಇಲಾಖೆ; ಪಿಎಫ್ಐ, ಎಸ್ಡಿಪಿಐಗೆ ಮರ್ಮಾಘಾತ ನೀಡಿದ ಎನ್ಐಎ ಐತಿಹಾಸಿಕ ದಾಳಿ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್”
ಬಿಜೆಪಿ ಉಡುಪಿ ನಗರ ‘ಸೇವಾ ಪಾಕ್ಷಿಕ’ : ಸೆ.20ರ ಸಂಜೆ 4.30ಕ್ಕೆ ಕ್ಲಾಕ್ ಟವರ್ ಬಳಿ ‘ಮೋದಿ ಪಥ’ ಪ್ರದರ್ಶಿನಿ, ಬೀದಿ ನೃತ್ಯ
ಉಡುಪಿ: ಬಿಜೆಪಿ ಉಡುಪಿ ನಗರ ವತಿಯಿಂದ ‘ಸೇವಾ ಪಾಕ್ಷಿಕ’ ಅಭಿಯಾನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ 72ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸೆ.20 ಮಂಗಳವಾರ ಸಂಜೆ 4.30ಕ್ಕೆ ಉಡುಪಿ ಕ್ಲಾಕ್ ಟವರ್ ಬಳಿ ರಾಜ್ಯದಲ್ಲೇ ಪ್ರಥಮ ಬಾರಿಗೆ ಪ್ರಧಾನಿ ಮೋದಿ ಜೀವನ, ದೂರದೃಷ್ಟಿ ಮತ್ತು ನೀತಿಗಳನ್ನು ಪ್ರಚುರಪಡಿಸುವ ಬೃಹತ್ ಎಲ್.ಇ.ಡಿ. ಪ್ರದರ್ಶಿನಿ ‘ಮೋದಿ ಪಥ’ ಹಾಗೂ ‘ಬೀದಿ ನೃತ್ಯ’ (ಫ್ಲ್ಯಾಶ್ ಮೋಬ್) ವೈಶಿಷ್ಟ್ಯಪೂರ್ಣ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ನಡೆಯಲಿರುವ ಈContinue reading “ಬಿಜೆಪಿ ಉಡುಪಿ ನಗರ ‘ಸೇವಾ ಪಾಕ್ಷಿಕ’ : ಸೆ.20ರ ಸಂಜೆ 4.30ಕ್ಕೆ ಕ್ಲಾಕ್ ಟವರ್ ಬಳಿ ‘ಮೋದಿ ಪಥ’ ಪ್ರದರ್ಶಿನಿ, ಬೀದಿ ನೃತ್ಯ”
ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ: ವಿಶ್ವಕರ್ಮ ಜಯಂತಿ, ನಾರಾಯಣ ಗುರು ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ
ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆಯು ಬಿಜೆಪಿ ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಸುರೇಂದ್ರ ಪಣಿಯೂರು ಅಧ್ಯಕ್ಷತೆಯಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜ್ಯೋತಿ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಡಾ! ಅಣ್ಣಯ್ಯ ಕುಲಾಲ್, ಅತ್ಯುತ್ತಮ ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಸಂಜೀವ ದೇವಾಡಿಗ,Continue reading “ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾ: ವಿಶ್ವಕರ್ಮ ಜಯಂತಿ, ನಾರಾಯಣ ಗುರು ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ”
ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ
ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯದ ಎಲ್ಲ ಮಂಡಲಗಳಲ್ಲಿ ಮಹಿಳಾಮೋರ್ಚ ವತಿಯಿಂದ ತಲಾ ಒಂದು ಅಂಗನವಾಡಿ ದತ್ತು ಸ್ವೀಕಾರ ಮಾಡಿ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸುಸ್ಥಿರ ಅಂಗನವಾಡಿ ಮಾಡಿ ಸುಶಾಸನ ದಿನದಂದು ಅವರಿಗೆ ಬಿಟ್ಟುಕೊಡುವ ಆದರ್ಶ ಕಾರ್ಯಕ್ರಮ. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಈ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್Continue reading “ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ”
ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ
ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ ನಡೆಯಿತು. ಅದರೊಂದಿಗೆ ನಮ್ಮ ಪಕ್ಷದ ಕಾರ್ಯಕರ್ತರಾದ ಚಂದ್ರ ಮಲ್ಲಾರ್ ಹಾಗೂ ಶೇಖ್ ನಝೀರ್ ಇವರು ಒಂದು ದಿನ 5 ಕಿ.ಮೀ. ವರೆಗೆ ಸಾರ್ವಜನಿಕರಿಗೆ ಉಚಿತ ಸೇವೆ ನೀಡುವುದನ್ನು ಉದ್ಘಾಟಿಸಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನಕಾರ್ಯದರ್ಶಿContinue reading “ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ”
ಮೋದೀಜಿ ಜನ್ಮದಿನದ ಅಂಗವಾಗಿ “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವಭಾವಿ ಸಭೆ
ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಸೆ.17 ರಿಂದ ಅ. 2 ಗಾಂಧಿಜಯಂತಿ ಯ ತನಕ ಸುಮಾರು 15 ದಿನಗಳ ಕಾಲ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನಡೆಸುವ ಕುರಿತಂತೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪಕ್ಷ ಕೊಟ್ಟ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿ ಪ್ರತೀ ಶಕ್ತಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಸೇವಾ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಮಾಹಿತಿ ನೀಡಿದೆನು. ವಿಶೇಷವಾಗಿ ಸ್ಬಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಕೆರೆಗಳ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರ ಇತ್ಯಾದಿContinue reading “ಮೋದೀಜಿ ಜನ್ಮದಿನದ ಅಂಗವಾಗಿ “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವಭಾವಿ ಸಭೆ”
ಸೇವಾ ಕಾರ್ಯಗಳ ಮಹಾಪೂರ : ಸೆ.17- ಅ.2 ಬಿಜೆಪಿ ‘ಸೇವಾ ಪಾಕ್ಷಿಕ’ ಅಭಿಯಾನಉಡುಪಿ ಜಿಲ್ಲಾ ಬಿಜೆಪಿ ಪತ್ರಿಕಾ ಗೋಷ್ಠಿ
ಪ್ರಧಾನಿ ನರೇಂದ್ರ ಮೋದಿಯವರ ಅಪ್ರತಿಮ ನಾಯಕತ್ವದಲ್ಲಿ ಕೇಂದ್ರ ಸರಕಾರವು ‘ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣ’ಕ್ಕೆ ಬದ್ಧವಾಗಿದೆ. ಸರಕಾರದ ಅನೇಕ ಜನಪರ ಯೋಜನೆಗಳನ್ನು ಸ್ವೀಕರಿಸಿ ಫಲಾನುಭವಿಗಳಾಗುವ ಮೂಲಕ ದೇಶವಾಸಿಗಳು ಇದನ್ನು ಅನುಮೋದಿಸಿದ್ದಾರೆ. ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ.25ರಂದು ಪಕ್ಷದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನ, ಅ.2ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರ ಸೂಚನೆಯಂತೆ, ರಾಜ್ಯ ಬಿಜೆಪಿ ಮಾರ್ಗದರ್ಶನದಲ್ಲಿ,Continue reading “ಸೇವಾ ಕಾರ್ಯಗಳ ಮಹಾಪೂರ : ಸೆ.17- ಅ.2 ಬಿಜೆಪಿ ‘ಸೇವಾ ಪಾಕ್ಷಿಕ’ ಅಭಿಯಾನಉಡುಪಿ ಜಿಲ್ಲಾ ಬಿಜೆಪಿ ಪತ್ರಿಕಾ ಗೋಷ್ಠಿ”
ಸೆ.17ರಿಂದ ಅ.2 ‘ಸೇವಾ ಪಾಕ್ಷಿಕ’ ಆಚರಣೆ; ‘ಶಕ್ತಿಕೇಂದ್ರಗಳ ಸಭೆ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಸೆ.17ರಿಂದ ಅ.2ರ ವರೆಗೆ ಉಡುಪಿ ಜಿಲ್ಲೆಯಾದ್ಯಂತ ನಡೆಯಲಿರುವ ‘ಸೇವಾ ಪಾಕ್ಷಿಕ’ವನ್ನು ಮಾದರಿ ಸೇವಾ ಚಟುವಟಿಕೆಗಳೊಂದಿಗೆ ಅರ್ಥಪೂರ್ಣವಾಗಿ ಆಚರಿಸುವ ಜೊತೆಗೆ ಚುನಾವಣಾ ಪೂರ್ವ ತಯಾರಿ ಪ್ರಕ್ರಿಯೆಯಾಗಿರುವ ಶಕ್ತಿಕೇಂದ್ರಗಳ ಸಭೆಗಳನ್ನು ಪರಿಣಾಮಕಾರಿಯಾಗಿ ಆಯೋಜಿಸಿ ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು. ಜಿಲ್ಲೆಯ ಎಲ್ಲಾ ಮಂಡಲಗಳ ಶಕ್ತಿಕೇಂದ್ರಗಳಲ್ಲಿ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ತಂಡ ಸಭೆಗಳನ್ನು ನಡೆಸಲಿದ್ದುContinue reading “ಸೆ.17ರಿಂದ ಅ.2 ‘ಸೇವಾ ಪಾಕ್ಷಿಕ’ ಆಚರಣೆ; ‘ಶಕ್ತಿಕೇಂದ್ರಗಳ ಸಭೆ’ ಯಶಸ್ವಿಗೊಳಿಸಿ: ಕುಯಿಲಾಡಿ ಸುರೇಶ್ ನಾಯಕ್”