ಹಿಜಾಬ್ ವಿವಾದ; ಆರಂಬಿಕ ಜಯ : ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್

ಉಡುಪಿ: ಹಿಜಾಬ್ ವಿವಾದ‌ ಹಿನ್ನೆಲೆಯಲ್ಲಿ ಸುಪ್ರೀಂ‌ ಕೋರ್ಟಿನ‌ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಶ್ಲೇಷಿಸಿದ್ದಾರೆ.

ವಿವಾದದ ಅಂತಿಮ‌ ತೀರ್ಪು ಬರುವ ವರೆಗೆ ಈಗಾಗಲೇ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಲೇಬೇಕಾಗಿದೆ. ಸಂವಿಧಾನದಲ್ಲಿ ನಂಬಿಕೆ ಇರುವವರು ಮುಂಬರುವ ತೀರ್ಪನ್ನು ಗೌರವಿಸಬೇಕು ಎಂದು ಕುಯಿಲಾಡಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Leave a comment

Design a site like this with WordPress.com
Get started