ಉಡುಪಿ ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ ಮುಗಿಲು ಮುಟ್ಟಿದ ‘ಕೋಟಿ ಕಂಠ ಸಾಮೂಹಿಕ ಗಾಯನ’

News by: ಜನತಾಲೋಕವಾಣಿನ್ಯೂಸ್

‘ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ‌ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಸಂಕೀರ್ಣ ‘ರಜತಾದ್ರಿ’ಯ ಮುಂಬಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸಂಭ್ರಮದಿಂದ ಯಶಸ್ವಿಯಾಗಿ ನೆರವೇರಿತು.

ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿ ‘ಕನ್ನಡ ಶಾಲು ಮತ್ತು ಟೋಪಿ’ಗಳನ್ನು ಧರಿಸಿ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ನಿಗದಿಪಡಿಸಿರುವ ಆರು ಕನ್ನಡ ಹಾಡುಗಳನ್ನು‌ ಲಯಬದ್ಧವಾಗಿ ಹಾಡಿ ಸಂಭ್ರಮಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕನ್ನಡ ನಾಡು ನುಡಿಯ ಪ್ರಮಾಣ ವಚನ ಭೋಧಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಜಿಲ್ಲಾ ಉಪಾಧ್ಯಕ್ಷರಾದ ರವಿ ಅಮೀನ್, ಸುಪ್ರಸಾದ್ ಶೆಟ್ಟಿ, ಪೆರ್ಣಂಕಿಲ ಶ್ರೀಶ ನಾಯಕ್, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಗೀತಾಂಜಲಿ ಎಮ್. ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಸದಾನಂದ ಉಪ್ಪಿನಕುದ್ರು, ಪ್ರಮುಖರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ದಿನಕರ ಬಾಬು, ಸಲೀಂ ಅಂಬಾಗಿಲು, ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಪೂರ್ಣಿಮಾ ಸುರೇಶ್ ನಾಯಕ್, ಕೆ.ರಾಘವೇಂದ್ರ ಕಿಣಿ, ಮಹೇಶ್ ಠಾಕೂರ್,‌ ಮಿಥುನ್ ಹೆಗ್ಡೆ, ಸತ್ಯಾನಂದ ನಾಯಕ್, ನಳಿನಿ‌ ಪ್ರದೀಪ್ ರಾವ್, ಗುರುಪ್ರಸಾದ್ ಶೆಟ್ಟಿ, ಅನಿತಾ ಶ್ರೀಧರ್, ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಶ್ರೀನಿಧಿ ಹೆಗ್ಡೆ, ವೀಣಾ ಎಸ್. ಶೆಟ್ಟಿ, ಸುರೇಂದ್ರ ಪಣಿಯೂರು, ಪ್ರವೀಣ್ ಕುಮಾರ್ ಗುರ್ಮೆ, ದಾವೂದ್ ಅಬೂಬಕರ್, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಶ್ರೀಕಾಂತ್ ನಾಯಕ್, ದಿನೇಶ್ ಅಮೀನ್, ಸಚಿನ್ ಪೂಜಾರಿ, ಗಣೇಶ್ ಕುಲಾಲ್, ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಮಾಂಬೆಟ್ಟು, ಅಲ್ವಿನ್ ಡಿ’ಸೋಜಾ ಹಾಗೂ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started