ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್


ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವೀಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 30ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರಗಿತು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಭಜನಾ ಸಂಚಾಲಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಮತ್ತು ಅವರ ಧರ್ಮಪತ್ನಿ ಗೋದಾವರಿ ಎಮ್. ಸುವರ್ಣರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ಸನ್ಮಾನಿಸಿದರು.



ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜೊತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ, ಮಹಿಳಾ ಘಟಕದ ಸಂಚಾಲಕಿ ವಿಜಯಾ ಜಿ. ಬಂಗೇರ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಸಂಘದ ಆಡಳಿತ ಸಮಿತಿ ಸದಸ್ಯರಾದ ಶಿವದಾಸ್ ಪಿ., ಮುದ್ದಣ್ಣ ಪೂಜಾರಿ, ರಮೇಶ್ ಕೋಟ್ಯಾನ್, ಸುಧಾಕರ್ ಎ., ಗುರುರಾಜ್ ಪೂಜಾರಿ, ಸತೀಶ್ ಪೂಜಾರಿ, ಶಿವಾಜಿ ಸನಿಲ್, ಭಾಸ್ಕರ ಕೋಟ್ಯಾನ್, ವಿನಯ್ ಕುಮಾರ್, ನಿತಿನ್ ಕುಮಾರ್, ಶಶಿಕಾಂತ್, ವಿನೋದ್ ಪೂಜಾರಿ, ಸುಧಾಕರ್, ಮಾಜಿ ಪ್ರ.ಕಾರ್ಯದರ್ಶಿ ಕುಶಲ್ ಕುಮಾರ್ ಎ., ಭಜನಾ ಸಹ ಸಂಚಾಲಕರಾದ ಮಾಧವ ಪೂಜಾರಿ, ಶಂಕರ ಪೂಜಾರಿ ಹಾಗೂ ಮಹಿಳಾ ಘಟಕದ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

500ಕ್ಕೂ ಮಿಕ್ಕಿ ಭಕ್ತಾದಿಗಳು ಶ್ರೀ ಸತ್ಯನಾರಾಯಣ ಪೂಜೆ ಸಲ್ಲಿಸಿದ್ದರು. ಮಹಾ ಪೂಜೆಯ ಬಳಿಕ ಅನ್ನ ಪ್ರಸಾದ ವಿತರಣೆ ನಡೆಯಿತು.

Leave a comment

Design a site like this with WordPress.com
Get started