ಉಡುಪಿ ತಾಲೂಕಿನ ಉಪ್ಪೂರು ವಲಯದಲ್ಲಿ ಶ್ರೀ ಶಿವ ಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ

News by: ಜನತಾಲೋಕವಾಣಿನ್ಯೂಸ್

ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ.ಟ್ರಸ್ಟ್ (ರಿ)ಉಡುಪಿ ತಾಲೂಕಿನ ಉಪ್ಪೂರು ವಲಯದ ಹಾವಂಜೆ ಕಾರ್ಯಕ್ಷೇತ್ರದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಶ್ರೀ ಶಿವಪಂಚಾಕ್ಷರಿ ಮಂತ್ರ ಪಠಣ ಹಾಗೂ ಬಿಲ್ವಾರ್ಚನೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಅಜಿತ್ ಗೋಳಿಕಟ್ಟೆ ವಹಿಸಿಕೊಂಡಿದ್ದರು,

ಶಿವಪಂಚಾಕ್ಷರಿ ಮಂತ್ರ ಪಠಣದ ಮಹತ್ವದ ಬಗ್ಗೆ ಹಾಗೂ ಧಾರ್ಮಿಕ ಆಚರಣೆಗಳ ಮಹತ್ವದ ಬಗ್ಗೆ ಶ್ರೀ ಹರಿಪ್ರಸಾದ್ ಭಟ್ ಹೆರ್ಗ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಲ್ವಾರ್ಚನೆ ಯನ್ನು ಶ್ರೀ ವೇದಮೂರ್ತಿ ಜಯರಾಮ ತಂತ್ರಿ ಹೆರ್ಗ ಇವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಹಿರಿಯ ನಿರ್ದೇಶಕರಾದ ಶ್ರೀ ಶಿವರಾಯ ಪ್ರಭುರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವ ಸಬಲೀಕರಣದ ಬಗ್ಗೆ ಹಾಗೂ ಕಾರ್ಯಕ್ರಮದ ಮಹತ್ವದ ಬಗ್ಗೆ ಮಾಹಿತಿ ನೀಡಿದರು

ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ಸುರೇಶ್ ಬಿ ಶೆಟ್ಟಿ, ಪೂಜಾ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ಹೆಚ್. ನಾಗರಾಜ್ ಹೆಗ್ಡೆ, , ತಾಲೂಕಿನ ಯೋಜನಾಧಿಕಾರಿಗಳಾದ ಶ್ರೀ ರಾಮು ಎಂ, ಉಪ್ಪೂರು ವಲಯ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ರಾಜು ಪೂಜಾರಿ, ಉಪ್ಪೂರು ವಲಯ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಮತಾ,ಹಾವಂಜೆ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಮಮತಾ ಶೆಟ್ಟಿ , ಕೀಳಂಜೆ ಒಕ್ಕೂಟ ಅಧ್ಯಕ್ಷರಾದ ಶ್ರೀಮತಿ ಸಂಪಾ, ವಲಯದ ಸೇವಾಪ್ರತಿನಿಧಿಗಳಾದ ಶ್ರೀಮತಿ ಶಶಿಕಲಾ, ಶ್ರೀಮತಿ ಪ್ರಮೋದ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಶ್ಯಾಮಲಾ, ಕುಮಾರಿ ಶ್ವೇತಾ, ಒಕ್ಕೂಟ ಪದಾಧಿಕಾರಿಗಳಾದ ಉದಯ್ ಶೆಟ್ಟಿ, ವಲಯದ ಒಕ್ಕೂಟ ಪದಾಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು, ವಲಯ ಮೇಲ್ವಿಚಾರಕರಾದ ರಮೇಶ್ಎನ್ ಸ್ವಾಗತಿಸಿದರು, ಹಾವಂಜೆ ಸೇವಾಪ್ರತಿನಿಧಿ ಕುಮಾರಿ ವಿದ್ಯಾ ಧನ್ಯವಾದಗೈದರು ಹಾಗೂ ಶ್ರೀ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು

Leave a comment

Design a site like this with WordPress.com
Get started