
NEWS By : ಜನತಾಲೋಕವಾಣಿನ್ಯೂಸ್
ಉಡುಪಿ:ಈಡಿಗ, ಬಿಲ್ಲವ, ನಾಮದಾರಿ ಸಹಿತ 26 ಉಪ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಪ್ರತ್ಯೇಕ ಕೋಶ ಹಾಗೂ ಸಪರೇಟ್ ಕಾರ್ಪಸ್ ಫಂಡ್ ಮೂಲಕ ಸ್ಥಾಪಿಸಲಾದ ‘ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ’ವನ್ನು ಪರಿವರ್ತಿಸಿ ಪ್ರಸಕ್ತ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ.
ಹಿಂದುಳಿದ ವರ್ಗಗಳಿಗೆ ಸೇರಿದ ಸದ್ರಿ ಸಮುದಾಯಗಳ ಹಲವಾರು ವರ್ಷಗಳ ಬೇಡಿಕೆಯನ್ನು ಪರಿಗಣಿಸಿ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ವನ್ನು ಘೋಷಿಸುವ ಜೊತೆಗೆ ಮುಂದಿನ ಬಜೆಟ್ ನಲ್ಲಿ ಸೂಕ್ತ ಅನುದಾನವನ್ನು ಘೋಷಿಸುವುದಾಗಿ ತಿಳಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಸರಕಾರದ ಗಮನವನ್ನು ಸೆಳೆದು ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ ಸ್ಥಾಪನೆ’ಗೆ ಒತ್ತು ನೀಡಿ ತೊಡಗಿಸಿಕೊಂಡ ಸದ್ರಿ ಸಮುದಾಯದ ಸಂಘಟಿತ ಪ್ರಯತ್ನ ಪ್ರಶಂಸನೀಯ.
ಸಮುದಾಯದ ಪ್ರಯತ್ನದ ಜೊತೆಗೆ ಕೈ ಜೋಡಿಸಿ ಸರಕಾರ ಮತ್ತು ಮುಖ್ಯಮಂತ್ರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ‘ಶ್ರೀ ನಾರಾಯಣಗುರು ಅಭಿವೃದ್ಧಿ’ ನಿಗಮ’ ಘೋಷಣೆಗೆ ಸಹಕರಿಸಿರುವ ಸಮುದಾಯದ ಸಚಿವರುಗಳು, ಸಂಸದರು, ಬಿಜೆಪಿ ರಾಜ್ಯಾಧ್ಯಕ್ಷರು, ಎಲ್ಲಾ ಶಾಸಕರು, ಮುಖಂಡರು ಹಾಗೂ ಸಮುದಾಯದ ಸ್ವಾಮೀಜಿಗಳು ಮತ್ತು ಸಂಘಟನೆಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.