ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನ

News by: ಜನತಾಲೋಕವಾಣಿನ್ಯೂಸ್

ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರ ಕಾಪು ಪುರಸಭಾ ವ್ಯಾಪ್ತಿಯ ಎಲ್ಲಾ ಶಕ್ತಿ ಕೇಂದ್ರಗಳ ವಿಜಯ ಸಂಕಲ್ಪ ಅಭಿಯಾನದ ಅನ್ವಯ ಸಭೆಯನ್ನು 19/01/2023 ನೇ ಗುರುವಾರ ಸಂಜೆ 4 ಗಂಟೆಗೆ ಸರಿಯಾಗಿ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಸಲಾಯಿತು. ಕಾಪು ಪುರಸಭೆ ವ್ಯಾಪ್ತಿಯ ಮಹಾಶಕ್ತಿ ಕೇಂದ್ರ ಅಧ್ಯಕ್ಷರು ಆದ ಸಂದೀಪ್ ಶೆಟ್ಟಿ ಕಲ್ಯ ಅಧ್ಯಕ್ಷತೆ ವಹಿಸಿದ್ದರು. ಕಾಪು ಮಂಡಲ ಅಧ್ಯಕ್ಷರು ಆದ ಶ್ರೀಕಾಂತ್ ನಾಯಕ್ ವಿಜಯ ಸಂಕಲ್ಪ ಅಭಿಯಾನದ ಬಗ್ಗೆ ವಿಸ್ತಾರವಾಗಿ ತಿಳಿಸಿದರು. ಪುರಸಭಾ ವ್ಯಾಪ್ತಿಯ ಬೂತ್ ಗಳ ಸಮಸ್ಯೆಯ ಬಗ್ಗೆ ವಿಸ್ತಾರವಾಗಿ ಚರ್ಚಿಸಲಾಯಿತು.ಸಭೆಯಲ್ಲಿ ಕಾಪು ಪ್ರಾಧಿಕಾರ ಅಧ್ಯಕ್ಷರು ಆದ ಸುಧಾಮ ಶೆಟ್ಟಿ, ಮಂಡಲ ನಿಕಟ ಪೂರ್ವ ಅಧ್ಯಕ್ಷರು ಜಿಲ್ಲಾ ಉಪಾಧ್ಯಕ್ಷರು ಆದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಇವರು ಪಕ್ಷದ ಸಂಘಟನೆ ಬಗ್ಗೆ ಮಾತನಾಡಿದರು.ಪಕ್ಷದ ಪ್ರಮುಖರು ಆದ ಗಂಗಾಧರ್ ಸುವರ್ಣ, ಮಂಡಲ ಪ್ರಧಾನ ಕಾರ್ಯದರ್ಶಿಯಾದ ಗೋಪಾಲ್ ಕೃಷ್ಣ ರಾವ್,ಮಹಾಶಕ್ತಿ ಕೇಂದ್ರ ಪ್ರಧಾನ ಕಾರ್ಯದರ್ಶಿಯಾದ ಶೈಲೇಶ್ ಅಮೀನ್, ಜಿಲ್ಲಾ ಉಸ್ತುವಾರಿಗಳಾದ ಸತೀಶ್ ಪೂಜಾರಿ ಉದ್ಯಾವರ, ಪ್ರವೀಣ್ ಪೂಜಾರಿ ಕಾಪು, ನವೀನ್ ಎಸ್ ಕೆ. ಅಭಿಯಾನ ಸಹ ಸಂಚಾಲಕರು ಆದ ಮಾಲಿನಿ ಇನ್ನಂಜೆ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆದ ಸುರೇಖಾ ಶೈಲೇಶ್, ಶಕ್ತಿ ಕೇಂದ್ರ ಅಧ್ಯಕ್ಷರಾದ ರತ್ನಾಕರ ಶೆಟ್ಟಿ, ಬೂತ್ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು, ಪುರಸಭಾ ಸದಸ್ಯರು, ಕಾಪು ಪುರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ ಸದಸ್ಯರು, ಮತ್ತು ಅನನ್ಯ ಜವಾಬ್ದಾರಿ ಹೊತ್ತ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಎಲ್ಲರೂ ಉಪಸ್ಥಿತರಿದ್ದರು*

Leave a comment

Design a site like this with WordPress.com
Get started