ಭಾರತೀಯ ಜನತಾ ಪಾರ್ಟಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನ ಉದ್ಘಾಟನಾ ಕಾರ್ಯಕ್ರಮ

News By: ಜನತಾಲೋಕವಾಣಿನ್ಯೂಸ್



ಕಾಪು: ತೆಂಕ ಪಂಚಾಯತ್ ವ್ಯಾಪ್ತಿಯ ಎರ್ಮಾಳು ‘ಇಂಸ್ಟೆಂಟ್ ಸೀ ರೆಸಾರ್ಟ್’ ನಲ್ಲಿ ನಡೆದ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಅಭಿಯಾನದ ಬಗ್ಗೆ ಕಾಪು ಕ್ಷೇತ್ರದಲ್ಲಿ ನಡೆಯುತ್ತಿರುವ ಪಕ್ಷದ ಚಟುವಟಿಕೆ ಬಗ್ಗೆ ಹಾಗೂ ಬಿಜೆಪಿ ಗೆಲುವಿನ ಅನಿವಾರ್ಯತೆ ಬಗ್ಗೆ ಮಾಹಿತಿಯನ್ನು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ನೀಡಿದರು. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ರವರು ಅಭಿವ್ರಧ್ಧಿ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರಿ. ಅಭಿಯಾನಕ್ಕೆ ಚಾಲನೆ ನೀಡಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪಕ್ಷ ನೀಡಿದ ಎಲ್ಲ ಕಾರ್ಯಕ್ರಮಗಳನ್ನು ಎಲ್ಲ ಬೂತ್ ಗಳಲ್ಲಿ ಪ್ರಾಮಾಣಿಕವಾಗಿ ಅನುಷ್ಠಾನ ಮಾಡಲು ಕರೆ ನೀಡಿದರು. ರಾಜ್ಯ ಬಿಜೆಪಿ ಕಾರ್ಯಕಾರಣಿ ಸದಸ್ಯರು ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಕಾರ್ಯಕರ್ತರಿಗೆ ಸ್ಪೂರ್ತಿ ತುಂಬಿದರು.

ಕಾರ್ಯಕ್ರಮದಲ್ಲಿ, ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ನಯನ ಗಣೇಶ್, ವಿಭಾಗ ಪ್ರಭಾರಿಗಳಾದ ಉದಯ ಕುಮಾರ್ ಶೆಟ್ಟಿ, ರಾಷ್ಟ್ರೀಯ ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಸುವರ್ಣ, ಜಿಲ್ಲಾ ಉಪಾಧ್ಯಕ್ಷರು ಪ್ರಕಾಶ್ ಶೆಟ್ಟಿ, ಶ್ರೀಶ ನಾಯಕ್, ಗೀತಂಜಲಿ ಸುವರ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನವೀನ್ ಶೆಟ್ಟಿ ಕುತ್ಯಾರು, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಅನಿಲ್ ಶೆಟ್ಟಿ ಕೊಡಿಬೆಟ್ಟು, ಗೋಪಾಲಕೃಷ್ಣ ರಾವ್, ನಿಕಟಪೂರ್ವ ಜಿಲ್ಲಾಧ್ಯಕ್ಷರು ಮಟ್ಟಾರು ರತ್ನಾಕರ್ ಹೆಗ್ಡೆ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರು ವೀಣಾ ಶೆಟ್ಟಿ ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಶಿವಪ್ರಸಾದ್ ಶೆಟ್ಟಿ, ವೇದಿಕೆಯಲ್ಲಿ ಪಕ್ಷದ ಅನನ್ಯ ಜವಾಬ್ದಾರಿ ನಿರ್ವಹಿಸುತ್ತಿರುವ ಪಕ್ಷದ ಪ್ರಮುಖರು, ಮಹಾಶಕ್ತಿ ಕೇಂದ್ರ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು /ಪ್ರಧಾನ ಕಾರ್ಯದರ್ಶಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು

Leave a comment

Design a site like this with WordPress.com
Get started