News by: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರದ ವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ ಕಾಪು ವೀರಭದ್ರ ಸಭಾ ಭವನದಲ್ಲಿ ನಡೆಯಿತು. ಕಳೆದ ಹತ್ತು ದಿನಗಳ ಕಾಲ ನಡೆದ ಬೂತ್ ವಿಜಯ ಅಭಿಯಾನದ ಬಗ್ಗೆ ವಿಚಾರ ವಿಮರ್ಶೆ ನಡೆಸಲಾಯಿತು. ಮುಂದೆ ಜ.21 ರಿಂದ ಜ.29 ರವರೆಗೆ ನಡೆಯುವ ವಿಜಯ ಸಂಕಲ್ಪ ಅಭಿಯಾನದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷರಾದContinue reading “ಬಿಜೆಪಿ ಕಾಪು ವಿಧಾನಸಭಾ ಕ್ಷೇತ್ರವಿಜಯ ಸಂಕಲ್ಪ ಅಭಿಯಾನದ ಪೂರ್ವಭಾವಿ ಸಭೆ”
Monthly Archives: January 2023
ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2,500 ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ: ಶೋಭಾ ಕರಂದ್ಲಾಜೆ
News by: ಜನತಾಲೋಕವಾಣಿನ್ಯೂಸ್ 2022-23ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಪೆಟ್ರೋಲಿಯಂ ಸಚಿವಾಲಯ ಕರ್ನಾಟಕ ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮಿನುಗಾರರಿಗೆ ಒಟ್ಟು 5,472 ಕೆಎಲ್ ಸೀಮೆ ಎಣ್ಣೆಯನ್ನು ಹಂಚಿಕೆ ಮಾಡಿತ್ತು. ಅದರಂತೆ ಹಂತ ಹಂತವಾಗಿ ರಾಜ್ಯದ ಮೀನುಗಾರರ ಸೌಲಭ್ಯಕ್ಕಾಗಿ 2,472 ಕೆಎಲ್ + 3,000 ಕೆಎಲ್ ಸೀಮೆ ಎಣ್ಣೆಯನ್ನು ಬಿಡುಗೊಡೆಗೊಳಿಸಿತ್ತು. ಇಂದು ದಿನಾಂಕ 12.1.2023ರಂದು ಪೆಟ್ರೋಲಿಯಂ ಸಚಿವಾಲಯ ಹಂಚಿಕೆಗಿಂತಲೂ ಹೆಚ್ಚುವರಿಯಾಗಿ 2,500 ಕೆಎಲ್ ಸೀಮೆ ಎಣ್ಣೆಯನ್ನು ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸೌಲಭ್ಯಕ್ಕಾಗಿ ಬಿಡುಗಡೆಗೊಳಿಸಿContinue reading “ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರಿಗೆ ಕೇಂದ್ರದಿಂದ ಹೆಚ್ಚುವರಿ 2,500 ಕೆಎಲ್ (25 ಲಕ್ಷ ಲೀಟರ್) ಸೀಮೆ ಎಣ್ಣೆ ಬಿಡುಗಡೆ ಮತ್ತು 2022-23ನೇ ಸಾಲಿನ ಹಂಚಿಕೆಗಿಂತಲೂ ಹೆಚ್ಚುವರಿ ಸೌಲಭ್ಯ ಬಿಡುಗಡೆಗೊಳಿಸಿದ ಕೇಂದ್ರ ಸರ್ಕಾರ: ಶೋಭಾ ಕರಂದ್ಲಾಜೆ”
ಬೂತ್ ವಿಜಯ ಅಭಿಯಾನ – ಭೈರಂಪಳ್ಳಿ ಗ್ರಾಮಪಂಚಾಯತ್ ಶಕ್ತಿಕೇಂದ್ರ ಸಭೆ
News by: ಜನತಾಲೋಕವಾಣಿನ್ಯೂಸ್ ಕಾಪು:ಭೈರಂಪಳ್ಳಿ ಪಂಚಾಯತ್ ವ್ಯಾಪ್ತಿಯಲ್ಲಿ ಶಕ್ತಿಕೇಂದ್ರ ಸಭೆ ಇಂದು ನಡೆಯಿತು. ಆಧ್ಯಕ್ಷತೆಯನ್ನು ಶಕ್ತಿಕೇಂದ್ರ ಪ್ರಮುಖ್ ಪ್ರಸಾದ್ ಮಲ್ಯ ವಹಿಸಿದ್ದರು. ಪಂಚಾಯತ್ ಅಧ್ಯಕ್ಷರೂ ಮಹಾಶಕ್ತಿಕೇಂದ್ರ ಅಧ್ಯಕ್ಷರೂ ಆದ ಜಿಯಾನಂದ ಹೆಗ್ಡೆ, ಜಿಲ್ಲಾ ಉಸ್ತುವಾರಿ ದಿಲ್ಲೇಶ್ ಶೆಟ್ಟಿ, ಅವಿನಾಶ್ ಶೆಟ್ಟಿಗಾರ್, ಆರು ಬೂತ್ ಅಧ್ಯಕ್ಷರುಗಳು, ಸತೀಶ್ ಶೆಟ್ಟಿ, ಪದ್ಮರಾಜ್ ಭಟ್ ಮತ್ತಿತರರು ವೇದಿಕೆಯನ್ನು ಉಪಸ್ಥಿತರಿದ್ದರು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್, ಪಕ್ಷ ಬೆಳೆದು ಬಂದ ಹಾದಿ, ಮೋದೀಜಿ ಸರಕಾರದ ಸಾಧನೆಗಳು, ರಾಜ್ಯ ಸರಕಾರದ ಸಾಧನೆಗಳು ಹಾಗೂContinue reading “ಬೂತ್ ವಿಜಯ ಅಭಿಯಾನ – ಭೈರಂಪಳ್ಳಿ ಗ್ರಾಮಪಂಚಾಯತ್ ಶಕ್ತಿಕೇಂದ್ರ ಸಭೆ”
ಪಡುಬಿದ್ರೆ ಪಂಚಾಯತ್ ಬೂತ್ ಸಭೆ
NEWS By: ಜನತಾಲೋಕವಾಣಿನ್ಯೂಸ್ ಕಾಪು: ಪಡುಬಿದ್ರಿ ಪಂಚಾಯತ್ ನ 181 & 182 ನೇ ಬೂತ್ ಪ್ರಮುಖರ ಸಭೆಯು ಶಕ್ತಿಕೇಂದ್ರ ಅಧ್ಯಕ್ಷರಾದ ರವಿಶೆಟ್ಟಿ ಅವರ ಮನೆಯಲ್ಲಿ ನಡೆಯಿತು. *ಬೂತ್ ವಿಜಯ ಅಭಿಯಾನದ* ಬಗ್ಗೆ ಸಭೆಯಲ್ಲಿ ಕ್ಷೇತ್ರ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಪಕ್ಷ ನೀಡಿದ ಐದು ಅಂಶಗಳ ಕಾರ್ಯಕ್ರಮಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದರು. ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆ ಬೆಟ್ಟು ಜಿಲ್ಲಾ ಉಸ್ತುವಾರಿಗಳಾದ ಕೇಸರಿ ಯುವರಾಜ್ ಹಾಗೂ ಅನಿಲ್ ಕುಮಾರ್ ಉಪಸ್ಥಿತರಿದ್ದರು. ಹಿರಿಯರಾದ ರಮಾಕಾಂತ್ ದೇವಾಡಿಗ, ಬಾಲಕ್ರಷ್ಣContinue reading “ಪಡುಬಿದ್ರೆ ಪಂಚಾಯತ್ ಬೂತ್ ಸಭೆ”
ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ
News by: ಜನತಾಲೋಕವಾಣಿನ್ಯೂಸ್ ಕಾಪು: ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ ಇಂದು ನಡೆಯಿತು. ಅಧ್ಯಕ್ಷತೆಯನ್ನು ಬೂತ್ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ವಹಿಸಿದ್ದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿ ಬೆಳೆದು ಬಂದ ಹಾದಿ, ಪ್ರಸ್ತುತ ದೇಶದ ವಿಚಾರಗಳು ಹಾಗೂ ಬೂತ್ ವಿಜಯ ಅಭಿಯಾನದ ಬಗ್ಗೆ ವಿವರಿಸಿದರು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಪಕ್ಷದ ಬಲವರ್ಧನೆ ಮಾಡಲು ವಿನಂತಿಸಿದರು. ಪಂಚಾಯತ್ ಸದಸ್ಯರುಗಳಾದ ಆಶಾ,Continue reading “ಮಣಿಪುರ ಗ್ರಾಮ ಪಂಚಾಯತ್ ಬೂತ್ ಸಂಖ್ಯೆ 54 ರ ಬೂತ್ ಸಭೆ”
ಜಲ ಜೀವನ್ ಮಿಷನ್ ಅಲೆವೂರು ಪಂಚಾಯತ್ ಗೆ ರೂ.10 ಕೋಟಿ ಅನುದಾನ – ಶ್ರೀಕಾಂತ ನಾಯಕ್
News by: ಜನತಾಲೋಕವಾಣಿನ್ಯೂಸ್ ಕಾಪು: ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಜಲ ಜೀವನ್ ಮಿಷನ್ ಯೋಜನೆಯಡಿ ಅಲೆವೂರು ಗ್ರಾಮ ಪಂಚಾಯತ್ ಗೆ ಸುಮಾರು 10 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು ಟೆಂಡರ್ ಪ್ರಕ್ರಿಯ ಅಂತಿಮ ಹಂತದಲ್ಲಿರುತ್ತದೆ. ಈ ಯೋಜನೆಯ ಪ್ರಕಾರ ಮುಂದಿನ ಮೂವತ್ತು ವರ್ಷಗಳ ಕಾಲ ಎಲ್ಲಾ ಮನೆ ಮನೆ ಗಳಿಗೆ ಶುಧ್ದ ನೀರನ್ನು ಪ್ರತೀ ವ್ಯಕ್ತಿಗೆ ಕನಿಷ್ಠ 55 ಲೀಟರ್ ನಷ್ಟು ನೀರು ಒದಗಿಸುವ ಯೋಜನೆ. ಈ ಯೋಜನೆಗೆ ಕೇಂದ್ರ ಸರಕಾರ ಶೇ.45, ರಾಜ್ಯ ಸರಕಾರContinue reading “ಜಲ ಜೀವನ್ ಮಿಷನ್ ಅಲೆವೂರು ಪಂಚಾಯತ್ ಗೆ ರೂ.10 ಕೋಟಿ ಅನುದಾನ – ಶ್ರೀಕಾಂತ ನಾಯಕ್”
ಬಿಜೆಪಿ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ : ಕುಯಿಲಾಡಿ
News by: ಜನತಾಲೋಕವಾಣಿನ್ಯೂಸ್ ಉಡುಪಿ:ವಿಧಾನಸಭಾ ಚುನಾವಣೆಯ ಪೂರ್ವಭಾವಿಯಾಗಿ ಪಕ್ಷದ ಸೂಚನೆಯಂತೆ ಜ.2ರಂದು ಪ್ರಾರಂಭಗೊಂಡು ಜ.12ರ ವರೆಗೆ ಜಿಲ್ಲೆಯ ಎಲ್ಲಾ 1,1111 ಮತಗಟ್ಟೆಗಳಲ್ಲಿ ನಡೆಯಲಿರುವ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜ.6ರಂದು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಜ.2ರಂದು ಜಿಲ್ಲೆಯ ಎಲ್ಲ 6 ಮಂಡಲ ಕೇಂದ್ರಗಳಲ್ಲಿ ಬೂತ್ ಅಧ್ಯಕ್ಷರ ನೇತೃತ್ವದಲ್ಲಿ ಕೇಂದ್ರ ಸಚಿವೆ ಕು!Continue reading “ಬಿಜೆಪಿ ಬೂತ್ ವಿಜಯ ಅಭಿಯಾನ ಜಿಲ್ಲೆಯಾದ್ಯಂತ ಹೊಸ ಸಂಚಲನ ಮೂಡಿಸಿದೆ : ಕುಯಿಲಾಡಿ”
ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ
News by: ಜನತಾಲೋಕವಾಣಿನ್ಯೂಸ್ ಕಾಪು: ಬೂತ್ ವಿಜಯ ಅಭಿಯಾನದ ರಾಜ್ಯ ಸಂಚಾಲಕರು, ರಾಜ್ಯ ಸರಕಾರದ ಹಿಂದುಳಿದ ವರ್ಗ ಹಾಗೂ ಸಮಾಜಕಲ್ಯಾಣ ಖಾತೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಕ್ತಿಕೇಂದ್ರ ಸಭೆಯಲ್ಲಿ ಭಾಗವಹಿಸಿ ಮಾರ್ಗದರ್ಶನ ಮಾಡಿದರು. ಹಾಗೂ ಬೂತ್ ಸಂಖ್ಯೆ 54 ರಲ್ಲಿ ಅಶೋಕ್ ಶೆಟ್ಟಿಯವರ ಮನೆಯಲ್ಲಿ ಪಕ್ಷದ ಧ್ವಜ ಹಾರಿಸಿದರು. ಕಾರ್ಯಕರ್ತರಿಗೆ ಕಾರ್ಯಕ್ರಮಗಳ ಮಾಹಿತಿ ನೀಡಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಪ್ರಸ್ತಾವನೆಗೈದರು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆContinue reading “ಮಣಿಪುರ ಗ್ರಾಮದ ದೆಂದೂರುಕಟ್ಟೆಯಲ್ಲಿ ಬೂತ್ ವಿಜಯ ಅಭಿಯಾನ ಕಾರ್ಯಕ್ರಮ:ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಾಗಿ”
ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಘೋಷಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ
NEWS By : ಜನತಾಲೋಕವಾಣಿನ್ಯೂಸ್ ಉಡುಪಿ:ಈಡಿಗ, ಬಿಲ್ಲವ, ನಾಮದಾರಿ ಸಹಿತ 26 ಉಪ ಪಂಗಡಗಳ ಶ್ರೇಯೋಭಿವೃದ್ಧಿಗಾಗಿ ಈ ಹಿಂದೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಪ್ರತ್ಯೇಕ ಕೋಶ ಹಾಗೂ ಸಪರೇಟ್ ಕಾರ್ಪಸ್ ಫಂಡ್ ಮೂಲಕ ಸ್ಥಾಪಿಸಲಾದ ‘ಶ್ರೀ ನಾರಾಯಣಗುರು ಅಭಿವೃದ್ಧಿ ಕೋಶ’ವನ್ನು ಪರಿವರ್ತಿಸಿ ಪ್ರಸಕ್ತ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನಾಗಿ ಘೋಷಿಸಿರುವ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಹಿಂದುಳಿದ ವರ್ಗಗಳಿಗೆ ಸೇರಿದ ಸದ್ರಿ ಸಮುದಾಯಗಳContinue reading “ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಘೋಷಣೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ”
‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ, ಈಡಿಗ, ನಾಮದಾರಿ ಸಹಿತ 26 ಉಪ ಪಂಗಡಗಳ ಹಲವಾರು ವರ್ಷಗಳ ಬೇಡಿಕೆಯನ್ನು ಮನ್ನಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಈ ಸಮುದಾಯಗಳ ಶೈಕ್ಷಣಿಕ, ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗಾಗಿ ‘ಶ್ರೀ ನಾರಾಯಣಗುರು ಅಭಿವೃದ್ಧಿ ನಿಗಮ’ವನ್ನು ಡಿ.5ರಂದು ಘೋಷಿಸಿರುವ ಐತಿಹಾಸಿಕ ನಿರ್ಣಯ ಅಭಿನಂದನೀಯ ಎಂದು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಸಮಿತಿ ಸದಸ್ಯ ಹಾಗೂ ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ ಇದರ ಉಪಾಧ್ಯಕ್ಷContinue reading “‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆ; ರಾಜ್ಯ ಸರಕಾರ ಹಾಗೂ ಮುಖ್ಯಮಂತ್ರಿಗಳ ಐತಿಹಾಸಿಕ ನಿರ್ಣಯ ಅಭಿನಂದನೀಯ”