ಫೆ.11 ಬೆಳಿಗ್ಗೆ 10.00ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಸಂಸ್ಮರಣೆ ಮತ್ತು ಸಮರ್ಪಣಾ ದಿನಾಚರಣೆ – ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭಾಗಿ



ಉಡುಪಿ: ಫೆ.11 ಭಾರತೀಯ ಜನಸಂಘದ ಸಂಸ್ಥಾಪಕರಲ್ಲಿ ಒಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಬಲಿದಾನ ದಿನ. ರಾಜಕೀಯ ಕ್ಷೇತ್ರದಲ್ಲಿ ಸಚ್ಚಾರಿತ್ರ್ಯ, ದೇಶ ಭಕ್ತಿ, ಧ್ಯೇಯವಾದ, ಏಕಾತ್ಮ ಮಾನವತಾವಾದ ಹಾಗೂ ಉನ್ನತ ರಾಜಕೀಯ ಮೌಲ್ಯಗಳಿಗೆ ಮೇಲ್ಪಂಕ್ತಿಯಾಗಿ ಇಂದಿಗೂ ಪ್ರೇರಣೆ ನೀಡುತ್ತಿರುವ ಪಂಡಿತ್ ಜೀ ಯವರ ಸಂಸ್ಮರಣೆಯನ್ನು ಸಮರ್ಪಣಾ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಫೆ.11 ಶನಿವಾರ ಬೆಳಿಗ್ಗೆ ಗಂಟೆ 10.00ಕ್ಕೆ ಪಂಡಿತ್ ದೀನದಯಾಳ್ ಉಪಾಧ್ಯಾಯ ರವರ ಸಂಸ್ಮರಣೆ ಹಾಗೂ ಸಮರ್ಪಣಾ ದಿನಾಚರಣೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನಡೆಯಲಿದೆ.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಪಂಡಿತ್ ಜೀ ಯವರ ಜೀವನಾದರ್ಶಗಳ ಕುರಿತು ಉಪನ್ಯಾಸ ನಡೆಸಿಕೊಡಲಿದ್ದಾರೆ.

ಪಕ್ಷದ ಚಟುವಟಿಕೆಗಳಿಗೆ ಪೂರಕವಾಗಿ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರಿಂದ ಸಂಜೆಯ ವರೆಗೆ ಸಾಮೂಹಿಕ ನಿಧಿ ಅರ್ಪಣೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಮತ್ತು ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಭಾಗವಹಿಸಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started