News By: ಜನತಾಲೋಕವಾಣಿನ್ಯೂಸ್ ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ಫೆ.20ರಂದು ಉಡುಪಿ ಜಿಲ್ಲೆಗೆ ಬೇಟಿ ನೀಡಲಿದ್ದು, ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಉಡುಪಿಯಲ್ಲಿ ಬೆಳಿಗ್ಗೆ 10.00ಕ್ಕೆ ನಡೆಯುವ ಜಿಲ್ಲಾ ಮಟ್ಟದ ಬೂತ್ ಸಮಿತಿ ಸಮಾವೇಶದಲ್ಲಿ ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ 2.00ಕ್ಕೆ ಬೈಂದೂರಿನಲ್ಲಿ ನಡೆಯುವ ಬೃಹತ್ ವಾಹನ ಜಾಥಾದಲ್ಲಿ ಪಾಲ್ಗೊಂಡು, 2.30ಕ್ಕೆ ಮುಳ್ಳಿಕಟ್ಟೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದರು.Continue reading “ಫೆ.20 : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉಡುಪಿ ಜಿಲ್ಲೆಗೆ – ಬೂತ್ ಸಮಿತಿ ಸಮಾವೇಶ, ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗಿ”