ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ನೇತೃತ್ವದ ಉಡುಪಿ ಜಿಲ್ಲಾ ಬೂತ್ ಸಮಿತಿ ಸಮಾವೇಶಕ್ಕೆ ಚಪ್ಪರ ಮಹೂರ್ತ

News By: ಜನತಾಲೋಕವಾಣಿನ್ಯೂಸ್

ಉಡುಪಿ: ಫೆ.20ರಂದು ಉಡುಪಿಯ ಎಂಜಿಎಂ ಕ್ರೀಡಾಂಗಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರ ನೇತೃತ್ವದಲ್ಲಿ ನಡೆಯಲಿರುವ ಬೂತ್ ಸಮಿತಿ ಸಮಾವೇಶಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಚಪ್ಪರ ಮುಹೂರ್ತ ನೆರವೇರಿಸಿದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ನಿಕಟಪೂರ್ವ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಮನೋಹರ್ ಎಸ್. ಕಲ್ಮಾಡಿ, ಪ್ರಕೋಷ್ಠಗಳ ರಾಜ್ಯ ಸಮಿತಿ ಸದಸ್ಯ ಅಂಡಾರು ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯದರ್ಶಿ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರರಾದ ಶಿವಕುಮಾರ್ ಅಂಬಲಪಾಡಿ, ಪ್ರತಾಪ್ ಶೆಟ್ಟಿ ಚೇರ್ಕಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು,
ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಸಹ ಸಂಚಾಲಕ ಡಾ! ವಿದ್ಯಾಧರ ಶೆಟ್ಟಿ, ಕರಂಬಳ್ಳಿ ಮಹಾಶಕ್ತಿ ಕೇಂದ್ರ ಸಂಚಾಲಕ ಕಿಶೋರ್ ಕುಮಾರ್ ಕರಂಬಳ್ಳಿ ಮುಂತಾದವರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started