Design a site like this with WordPress.com
Get started

ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ

News By: ಜನತಾಲೋಕವಾಣಿನ್ಯೂಸ್ ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರು ಮತ್ತು ಮತದಾರರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು.Continue reading “ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ”

ಸೋಲಿನ ಖಾತರಿಯಿಂದ ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕಾರ್ಡ್ ವಿತರಣೆ: ಕುಯಿಲಾಡಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಜನತೆಯ ವಿಶ್ವಾಸ ಕಳೆದುಕೊಂಡಿರುವ ಕಾಂಗ್ರೆಸ್ ಇದೀಗ ಸೋಲಿನ ಖಾತರಿಯಿಂದ ವಿತರಿಸುತ್ತಿರುವ ಗ್ಯಾರಂಟಿ ಕಾರ್ಡ್ ಮತದಾರರನ್ನು ಯಾಮಾರಿಸುವ ಸುಳ್ಳಿನ ಕಂತೆಯಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ‘ಗರೀಭೀ ಹಠಾವೋ’ ಎಂಬ ಪೊಳ್ಳು ಘೋಷಣೆಯೊಂದಿಗೆ ಸುದೀರ್ಘ ಅವಧಿಗೆ ದುರಾಡಳಿತ ನಡೆಸಿ ದೇಶ ಲೂಟಿಗೈದ ಕಾಂಗ್ರೆಸ್ಸಿನ ಸ್ವತಃ ಪರಮೋಚ್ಚ ನಾಯಕರು ಭ್ರಷ್ಟಾಚಾರ ಹಗರಣಗಳಲ್ಲಿ ತನಿಖೆ ಎದುರಿಸುತ್ತಾ ಬೇಲ್ ಮೇಲೆ ಹೊರಗಿರುವುದು ಕಾಂಗ್ರೆಸ್ಸಿನ ನೈತಿಕತೆಗೆ ಒಡ್ಡಿರುವ ಜ್ವಲಂತ ಸವಾಲಾಗಿದೆ. ಅನ್ನಭಾಗ್ಯ ಕೇಂದ್ರContinue reading “ಸೋಲಿನ ಖಾತರಿಯಿಂದ ಕಾಂಗ್ರೆಸ್ ಸುಳ್ಳು ಗ್ಯಾರಂಟಿ ಕಾರ್ಡ್ ವಿತರಣೆ: ಕುಯಿಲಾಡಿ”