ಕಟಪಾಡಿ ಬೂತ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರ ಮತ್ತು ಮತದಾರರ ಸಭೆ

News By: ಜನತಾಲೋಕವಾಣಿನ್ಯೂಸ್

ಕಾಪು: ಬಿಜೆಪಿ ಕಾಪು ಮಂಡಲದ ಕಟಪಾಡಿ ಗ್ರಾಮ‌ಪಂಚಾಯತ್ ವ್ಯಾಪ್ತಿಯ ವಾರ್ಡ್ ಸಂಖ್ಯೆ 85 ರಲ್ಲಿ ಕಾರ್ಯಕರ್ತರು ಮತ್ತು ಮತದಾರರ ಚುನಾವಣಾ ಪೂರ್ವಭಾವಿ ಸಭೆ ನಡೆಯಿತು. ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಬಿಜೆಪಿಯ ಇತಿಹಾಸದ ಬಗ್ಗೆ, ಪ್ರಸ್ತುತ ಬಿಜೆಪಿ ಆಡಳಿತದ ಬಗ್ಗೆ ಹಾಗೂ ಮುಂದೆ ಬಿಜೆಪಿ ಚುನಾವಣೆ ಗೆಲ್ಲುವ ಅನಿವಾರ್ಯತೆಯ ಬಗ್ಗೆ ವಿಸ್ತಾರವಾದ ಮಾಹಿತಿ ನೀಡಿದರು. ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿಯವರು ಮಾತನಾಡಿ ಪಕ್ಷದ ಗೆಲುವಿಗೆ ಶ್ರಮಿಸಲು ಕರೆ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್ ಅಭಿವೃದ್ಧಿ ಕುರಿತಾಗಿ ಮಾತನಾಡಿ ಮತ್ತೆ ಬಿಜೆಪಿಯನ್ನು‌ ಗೆಲ್ಲಿಸಲು ಎಲ್ಲರೂ‌ ಒಂದಾಗಿ‌ ಕೆಲಸ ಮಾಡಲು‌ಕರೆ ನೀಡಿದರು. ಬೂತ್ ಪ್ರಧಾನ‌ಕಾರ್ಯದರ್ಶಿ ಕವಿತಾ ಸುವರ್ಣ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾಮೋರ್ಚ ಅಧ್ಯಕ್ಷರಾದ ವೀಣಾ ಶೆಟ್ಟಿ, ಮಂಡಲ ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಮಹಾಶಕ್ತಿಕೇಂದ್ರ ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಪಂಚಾಯತ್ ಸದಸ್ಯರಾದ ಸುಮತಿ ಸೇರಿಗಾರ್, ಆಸಿಫ್ ಕಟಪಾಡಿ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started