
ಕಾಪು: ಕುರ್ಕಾಲು ಮಹಾಶಕ್ತಿಕೇಂದ್ರ ವ್ಯಾಪ್ತಿಯ ಬೂತ್ ಅಧ್ಯಕ್ಷರ, ಜನಪ್ರತಿನಿಧಿಗಳ ಹಾಗೂ ಪದಾಧಿಕಾರಿಗಳ ಸಭೆ ನಡೆಯಿತು. ಬೂತ್ ಮಟ್ಟದಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮಾಹಿತಿ ನೀಡಿದರು. ಸಭೆಯಲ್ಲಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಚುನಾವಣಾ ಪ್ರಭಾರಿ ಸುಲೋಚನಾ ಭಟ್, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ರಾಜ್ಯಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ವಿಶ್ವನಾಥ್ ಕುರ್ಕಾಲು, ಪ್ರಧಾನ ಕಾರ್ಯದರ್ಶಿ ಗುರುಕ್ರಪಾ ರಾವ್, ಮಂಡಲ ಕಾರ್ಯದರ್ಶಿ ಮಾಲಿನಿ ಶೆಟ್ಟಿ, ಮಹಿಳಾ ಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ಎಸ್ ಸಿ ಮೋರ್ಚ ಅಧ್ಯಕ್ಷರಾದ ನಾಗೇಂದ್ರ, ಮುರಳೀಧರ್ ಪೈ, ಶಕ್ತಿಕೇಂದ್ರ ಪ್ರಮುಖರಾದ ಪ್ರವೀಣ್ ಶೆಟ್ಟಿ, ಸಂತೋಷ್, ನಿತಿನ್ ಸೇರಿಗಾರ್, ಪಂಚಾಯತ್ ಸದಸ್ಯರುಗಳು, ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.