
ಕಾಪು: ಉದ್ಯಾವರ ಮಹಾಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪೂರ್ವಬಾವಿ ಸಭೆಯು ಸೌಂದರ್ಯ ಸಭಾಂಗಣ ದಲ್ಲಿ ನಡೆಯಿತು. ಬೂತ್ ಗಳಲ್ಲಿ ಮಾಡಬೇಕಾದ ಚಟುವಟಿಕೆಗಳ ಬಗ್ಗೆ ವಿಸ್ತಾರವಾಗಿ ಕಾಪು ಮಂಡಲ ಅಧ್ಯಕ್ಷರಾದ ಶ್ರೀಕಾಂತ್ ನಾಯಕ್ ಮಾಹಿತಿ ನೀಡಿದರು. ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ, ಮಂಡಲ ಪ್ರದಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಉದ್ಯಾವರ ಉಸ್ತುವಾರಿ ನವೀನ್ ಎಸ್ ಕೆ, ಜಿಲ್ಲಾ ಪ್ರಕೋಷ್ಟಗಳ ಸಂಚಾಲಕ ವಿಜಯ ಕುಮಾರ್ ಉದ್ಯಾವರ ವಿಸ್ತರಕ್ ದಿನಕರ ಪೂಜಾರಿ ಮಂಡಲ ಕಾರ್ಯದರ್ಶಿ ರಾಜೇಶ್ ಕುಂದರ್ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಸುವರ್ಣ ಮಹಾಶಕ್ತಿ ಕೇಂದ್ರ ಅಧ್ಯಕ್ಷ ರವಿ ಕೋಟ್ಯಾನ್ ಪಡುಕರೆ ,ಕಾರ್ಯದರ್ಶಿ ಅಶೋಕ್ ಕುಮಾರ್ ಅಲೆವೂರ್,ಜಿಲ್ಲಾ ಯುವಮೋರ್ಚಾ ಪದಾಧಿಕಾರಿಗಳಾದ ಸಚಿನ್ ಬೊಲ್ಜೆ ಸತೀಶ್ ಪೂಜಾರಿ, ಪ್ರಮುಖರಾದ ಜಿತೇಂದ್ರ ಶೆಟ್ಟಿ, ವಿನೋದ್, ಬೇಬಿ ರಾಜೇಶ್, ಆಶಿಶ್ ಶೆಟ್ಟಿ, ಸುರೇಶ್ ನಾಯಕ್ , ಗ್ರಾಮ ಪಂಚಾಯ್ತ್ ಸದಸ್ಯರು, ಶಕ್ತಿ ಕೇಂದ್ರ ಪ್ರಮುಖರು, ಬೂತ್ ಅಧ್ಯಕ್ಷರು, ಕಾರ್ಯದರ್ಶಿಗಳು ಭಾಗವಹಿಸಿದ್ದರು.