ಮೇ 3ರ ಮೂಲ್ಕಿ ಕೋಲ್ನಾಡ್ ಮೋದಿ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನೆ ನಡೆಸಿದ ಮೋದಿ ಪ್ರಚಾರ ಸಭೆಯ ರಾಜ್ಯ ಸಂಚಾಲಕ ಕೆ.ಉದಯಕುಮಾರ್ ಶೆಟ್ಟಿ

ಉಡುಪಿ: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮೇ 3ರಂದು ಮೂಲ್ಕಿ ಕೋಲ್ನಾಡ್ ನಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿಯವರ ಚುನಾವಣಾ ಪ್ರಚಾರ ಸಭೆಯ ಸ್ಥಳದಲ್ಲಿ ಪೂರ್ವಸಿದ್ಧತಾ ಪರಿಶೀಲನಾ ಸಭೆಯಲ್ಲಿ ಪ್ರಧಾನಿ ಮೋದಿ ಪ್ರಚಾರ ಸಭೆಗಳ ರಾಜ್ಯ ಸಂಚಾಲಕ ಹಾಗೂ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ದ.ಕ. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಮ್., ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್, ರಾಜ್ಯ ವಕ್ತಾರ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ದ.ಕ. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಸ್ತೂರಿ ಪಂಜಾ, ಮೂಡಾ ಅಧ್ಯಕ್ಷ ರವಿಶಂಕರ್ ಮಿಜಾರ್, ಮೀನುಗಾರಿಕಾ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್, ಬಿಜೆಪಿ ಮೂಲ್ಕಿ ಮೂಡಬಿದ್ರೆ ಮಂಡಲಾಧ್ಯಕ್ಷ ಸುಧೀರ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started