
ಉಡುಪಿ: ಉಡುಪಿ ಜಿಲ್ಲೆಯ ಪ್ರಬುದ್ಧ ರಾಜಕಾರಿಣಿಗಳಲ್ಲೊಬ್ಬರು, ನೇರ ನಡೆ ನುಡಿಯ ಮಾಜಿ ಶಾಸಕ ಯು.ಆರ್. ಸಭಾಪತಿ ಯವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ಸೂಚಿಸಿದೆ.
ನೂತನ ಉಡುಪಿ ಜಿಲ್ಲೆ ರಚನೆಯ ಸಂದರ್ಭದಲ್ಲಿ ಜಿಲ್ಲೆಯ ಇತರ ಹಿರಿಯ ರಾಜಕೀಯ ಮುತ್ಸದ್ಧಿಗಳ ಸಹಿತ ಮಾಜಿ ಶಾಸಕ ಯು.ಆರ್. ಸಭಾಪತಿಯವರ ಶ್ರಮ ಸ್ಮರಣೀಯ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.