ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತ ಅಶೋಕ್ ಪರ್ಕಳ ನಿಧನಕ್ಕೆ ಜಿಲ್ಲಾ ಬಿಜೆಪಿ ಸಂತಾಪ


ಉಡುಪಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಹಲವಾರು ವರ್ಷಗಳಿಂದ ಸಮಾಜಮುಖಿ ಸೇವೆ ಸಲ್ಲಿಸುತ್ತಿದ್ದ ಅಶೋಕ್ ಪರ್ಕಳ(54 ವರ್ಷ) ಇವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಸಂಘದ ಪ್ರಚಾರಕರಾಗಿ ಮಣಿಪುರ ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಸೇವೆ ಸಲ್ಲಿಸಿ, ಪ್ರಸ್ತುತ ಸಂಘದ ಉಡುಪಿ ಜಿಲ್ಲೆಯ ಧರ್ಮ ಜಾಗರಣಾ ಇದರ ಜವಾಬ್ದಾರಿ ನಿರ್ವಹಿಸುತ್ತಿದ್ದ ಅಶೋಕ್ ಪರ್ಕಳ ರವರು ಸರಳ ಸಜ್ಜನಿಕೆ ಹಾಗೂ ಸದಾ ಚುರುಕಿನ ವ್ಯಕ್ತಿತ್ವ ಹೊಂದಿದ್ದರು. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a comment

Design a site like this with WordPress.com
Get started