
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಳ್ಳೂರು ಜನ ಜಾಗೃತಿ ವೇದಿಕೆಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಭಾನುವಾರ ಕೊಳಲಗಿರಿ ಸರಕಾರಿ ಪ್ರೌಢ ಶಾಲೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಪ್ಪೂರು ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ರಾಜು ಪೂಜಾರಿ ಅವರು, ಮಹಿಳೆಯರು ಕೇವಲ ತಂಬಾಕನ್ನು ಮಾತ್ರ ವಿರೋಧಿಸುವುದಲ್ಲದೆ ಮೆಹೆಂದಿ ಕಾರ್ಯಕ್ರಮದಲ್ಲಿ ಕುಣಿತ ಮತ್ತು ಕುಡಿತಕ್ಕೆ ಮಕ್ಕಳನ್ನು ಕರೆದುಕೊಂಡು ಹೋಗುವುದನ್ನು ನಿಲ್ಲಿಸುವಂತೆ ಜಾಗೃತಿ ಮೂಡಿಸಬೇಕು ಎಂದರು.
ನಂತರ ಕೊಳಲಗಿರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಧೂಮಪಾನದಿಂದಾಗುವ ದುಷ್ಪರಿಣಾಮದ ಬಗ್ಗೆ ಪ್ರಹಸನ ವೊಂದನ್ನು ಆಡಿ ಮಾಹಿತಿ ನೀಡಿದರು
ಉಡುಪಿ ತಾಲೂಕು ಯೋಜನಾಧಿಕಾರಿ ರಾಮ ಎಂ. ಡಾ.ಬಿಂದು ಭಟ್, ಶೈಲ ಶಾಮನೂರ್, ಮೇಲ್ವಿಚಾರಕರಾದ ರಮೇಶ್, ಮನೀಶ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಕವಿತಾ, ಸೇವಾಪ್ರತಿನಿಧಿ ಶಶಿಕಲಾ, ಮಂಜುಳಾ ನಾಗೇಂದ್ರ ಆಚಾರ್ಯ ಉಪಸ್ಥಿತರಿದ್ದರು.