ಶ್ಯಾಮಪ್ರಸಾದ್ ಮುಖರ್ಜಿ ಜೀವನಾದರ್ಶ ಕಾರ್ಯಕರ್ತರಿಗೆ ಪ್ರೇರಣಾದಾಯಕ: ಕುಯಿಲಾಡಿ ಸುರೇಶ್ ನಾಯಕ್



ಉಡುಪಿ: ಅಖಂಡ ಭಾರತದ ಸಾರ್ವಭೌಮತೆಗೆ ವಿಶೇಷ ಒತ್ತು ನೀಡುವ ಜೊತೆಗೆ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸ್ಥಾನಮಾನವನ್ನು ವಿರೋಧಿಸುತ್ತಾ ತನ್ನ ಜೀವಿತಾವಧಿಯನ್ನು ದೇಶದ ಸಮಗ್ರತೆ ಮತ್ತು ಅಖಂಡತೆಗಾಗಿ ಸಮರ್ಪಿಸಿದ ಭಾರತೀಯ ಜನಸಂಘದ ಸಂಸ್ಥಾಪಕಲ್ಲೊಬ್ಬರಾದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಜೀವನಾದರ್ಶ ಬಿಜೆಪಿ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಜೂ.23ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಸಂಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮಹತ್ವಪೂರ್ಣ ಪಾತ್ರ ವಹಿಸಿದ್ದ ಮುಖರ್ಜಿಯವರು ಸ್ವತಂತ್ರ ಭಾರತದ ಪ್ರಥಮ ಕೈಗಾರಿಕಾ ಮಂತ್ರಿಯಾಗಿದ್ದರು. ಸರಕಾರದ ತುಷ್ಟೀಕರಣ ನೀತಿಯನ್ನು ವಿರೋಧಿಸಿ ನೆಹರೂ ಸಂಪುಟಕ್ಕೆ ರಾಜೀನಾಮೆ ನೀಡಿದ ಮುಖರ್ಜಿಯವರು ‘ಒಂದು ದೇಶದಲ್ಲಿ 2 ಪ್ರಧಾನಿ, 2 ಸಂವಿಧಾನ ಮತ್ತು 2 ಧ್ವಜ ಇರಲು ಸಾಧ್ಯವಿಲ್ಲ’ ಎಂಬ ತತ್ವದಡಿ ಕಾಶ್ಮೀರದ ವಿಮೋಚನೆಗೆ ಹೋರಾಡುತ್ತಾ ಹುತಾತ್ಮರಾದರು. ಅವರ ಸಂಶಯಾಸ್ಪದ ಸಾವು ಇಂದಿಗೂ ನಿಗೂಢವಾಗಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರ ಸಂವಿಧಾನದ 370ನೇ ವಿಧಿಯನ್ನು ರದ್ದು ಮಾಡುವ ಮೂಲಕ ಡಾ! ಶ್ಯಾಮಪ್ರಸಾದ್ ಮುಖರ್ಜಿಯವರ ಕನಸನ್ನು ನನಸುಗೊಳಿಸಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷೆ ಗೀತಾಂಜಲಿ ಎಮ್. ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಪ್ರಧಾನ ಕಾರ್ಯದರ್ಶಿಗಳಾದ ರಶ್ಮಿತಾ ಬಿ. ಶೆಟ್ಟಿ, ಪ್ರಮೀಳಾ ಹರೀಶ್, ಬಿಜೆಪಿ ಉಡುಪಿ ಗ್ರಾಮಾಂತರ ಮಂಡಲಾಧ್ಯಕ್ಷೆ ವೀಣಾ ನಾಯ್ಕ್, ಪಕ್ಷದ ಪ್ರಮುಖರು ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started