ಸಮಾನ ಮನಸ್ಕರ ತಂಡದ ವತಿಯಿಂದ ವಿಧ್ಯಾರ್ಥಿಗಳಿಗೆ ಉಚಿತ ಪುಸ್ತಕ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ವಿತರಣೆ



ಶಶಿಧರ ಪುರೋಹಿತ ಕಟಪಾಡಿ ಇವರ ನೇತೃತ್ವದಲ್ಲಿ ಸಮಾನ ಮನಸ್ಕರ ತಂಡದ ವತಿಯಿಂದ ವಿದ್ಯಾರ್ಥಿಗಳಿಗೆ ಕೊಡಮಾಡಿದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಇಂದು ದಿನಾಂಕ 29-06-2023 ರಂದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು.



ಉಚಿತ ಪುಸ್ತಕ ವಿತರಣೆ ಮಾಡಿದ ಶಾಸಕರು ಸಮಾನ ಮನಸ್ಕ ತಂಡಕ್ಕೆ ಮತ್ತು ಇದಕ್ಕೆ ಸಹಕರಿಸಿದ ದಾನಿಗಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಶಿಧರ ಪುರೋಹಿತ, ಸದಾಶಿವ ಆಚಾರ್ಯ, ಸಹನಾ ದೇವರಾಜ ಆಚಾರ್ಯ, ಅಚ್ಚುತ ಆಚಾರ್ಯ ಕಾಪು, ನಿವೃತ್ತ ತಹಶೀಲ್ದಾರರಾದ ಕೆ. ಮುರಳಿಧರ ಆಚಾರ್ಯ, ನಿವೃತ್ತ ಯೋಧ ವಾದಿರಾಜ ಆಚಾರ್ಯ, ಕಾಪು ಕಾಳಿಕಾಂಬ ದೇವಸ್ಥಾನ ಮೊಕ್ತೇಸರರಾದ ಶೇಖರ ಆಚಾರ್ಯ, ಗಣೇಶ್ ಆಚಾರ್ಯ ಉಚ್ಚಿಲ, ಭಾಸ್ಕರ ಆಚಾರ್ಯ, ಚಂದ್ರಶೇಖರ ಆಚಾರ್ಯ, ದಿವಾಕರ ಆಚಾರ್ಯ, ಕಾರ್ತಿಕ್ ಆಚಾರ್ಯ, ಬಿ.ಎ ಆಚಾರ್ಯ ಮಣಿಪಾಲ, ರವಿ ಪುರೋಹಿತ ಉಪಸ್ಥಿತರಿದ್ದರು.

Leave a comment

Design a site like this with WordPress.com
Get started