ಜೂ.22, ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಸಮಾವೇಶ: ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳ ಜನಪರ ಆಡಳಿತವನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಮೋದಿ ಸರಕಾರದ ಸಾಧನೆಗಳನ್ನು ಜನಮಾನಸದಲ್ಲಿ ಪ್ರಚಲಿತಗೊಳಿಸುವ ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಬೆಳಕು ಚೆಲ್ಲುವ ನಿಟ್ಟಿನಲ್ಲಿ 1 ತಿಂಗಳ ಕಾಲ ರಾಜ್ಯಾದ್ಯಂತ ಬಿಜೆಪಿ ಜಿಲ್ಲಾ ಸಮಾವೇಶಗಳು ನಡೆಯಲಿವೆ. ಬಿಜೆಪಿ ಉಡುಪಿ ಜಿಲ್ಲಾ ಸಮಾವೇಶವು ಜೂ.22, ಗುರುವಾರ ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರ್ ನ ಶೇಷಶಯನ ಸಭಾಂಗಣದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಜೂ.22, ಮಧ್ಯಾಹ್ನ ಗಂಟೆ 3.00ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಬಿಜೆಪಿ ಜಿಲ್ಲಾ ಸಮಾವೇಶ: ಕುಯಿಲಾಡಿ”

ಜೂ.21ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂ.21 ಬುಧವಾರ ಬೆಳಿಗ್ಗೆ ಗಂಟೆ 7.30ಕ್ಕೆ ಉಡುಪಿಯ ಶೇಷಶಯನ ಸಭಾಂಗಣದಲ್ಲಿ ಆಚರಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಯೋಗಾಭ್ಯಾಸ ತರಗತಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದ ರಾಜ್ಯ ಸರಕಾರದ ವಿರುದ್ಧ ಜೂ.19ರಂದು ಜಿಲ್ಲಾ ವಿ.ಹಿಂ.ಪ., ಭಜರಂಗ ದಳದ ಪ್ರತಿಭಟನೆ; ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ: ಕುಯಿಲಾಡಿ

ಉಡುಪಿ: ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸು ಪಡೆದಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಉಡುಪಿ ಜಿಲ್ಲೆ ಇದರ ನೇತೃತ್ವದಲ್ಲಿ ಜೂ.19 ಸೋಮವಾರ ಸಂಜೆ 4.00 ಗಂಟೆಗೆ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿ, ಮಣಿಪಾಲದ ರಜತಾದ್ರಿಯ ಬಳಿ ನಡೆಯುವ ಬೃಹತ್ ಪ್ರತಿಭಟನೆಗೆ ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ,Continue reading “ಮತಾಂತರ ನಿಷೇಧ ಕಾಯ್ದೆ ವಾಪಸ್ ಪಡೆದ ರಾಜ್ಯ ಸರಕಾರದ ವಿರುದ್ಧ ಜೂ.19ರಂದು ಜಿಲ್ಲಾ ವಿ.ಹಿಂ.ಪ., ಭಜರಂಗ ದಳದ ಪ್ರತಿಭಟನೆ; ಉಡುಪಿ ಜಿಲ್ಲಾ ಬಿಜೆಪಿ ಸಂಪೂರ್ಣ ಬೆಂಬಲ: ಕುಯಿಲಾಡಿ”

ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್

ಕಾಪು: ವಿಶ್ವಹಿಂದೂಪರಿಷತ್ ಬಜರಂಗದಳ ಉಡುಪಿ ಜಿಲ್ಲೆ ಇವರು ಇದೇ ಬರುವ ಸೋಮವಾರ ಜೂನ್ 19 ರಂದು ಸಂಜೆ 4.00 ಗಂಟೆಗೆ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯ್ದೆ ವಾಪಾಸ್ ಪಡೆದು ಹಿಂದೂ ವಿರೋಧಿ ನೀತಿ ಅನುಸರಿಸಿರುವುದನ್ನು ಖಂಡಿಸಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆಸುವ ಪ್ರತಿಭಟನೆಗೆ ಕಾಪು ಬಿಜೆಪಿಯಿಂದ ಸಂಪೂರ್ಣ ಬೆಂಬಲವಿದೆ. ಅಲ್ಲದೆ ನೂರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಈ‌ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಿದ್ದು ರಾಜ್ಯ ಸರಕಾರದ ಹಿಂದೂ ವಿರೋಧೀ ದೋರಣೆಗೆ ನಮ್ಮ ಸ್ಪಷ್ಟ ವಿರೋಧವಿದ್ದು ಮುಂದಿನContinue reading “ಮತಾಂತರ ನಿಷೇಧ ಕಾಯ್ದೆ ಹಿಂಪಡೆತ- ರಾಜ್ಯ ಸರಕಾರದ ವಿರುಧ್ದ ವಿ ಎಚ್ ಪಿ ಬಜರಂಗದಳ ಪ್ರತಿಭಟನೆಗೆ ಸಂಪೂರ್ಣ ಬೆಂಬಲ – ಶ್ರೀಕಾಂತ ನಾಯಕ್”

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ

ಉಡುಪಿ: ಸದಾ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರ ನಿಷೇಧ ಕಾಯ್ದೆಗೆ ಈ ಹಿಂದೆ ಬಿಜೆಪಿ ಸರಕಾರ ತಂದಿರುವ ತಿದ್ದುಪಡಿಯನ್ನು ವಾಪಾಸು ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿರುವುದು ಖಂಡನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ. ಈಗಾಗಲೇ ಸಮಾಜದಲ್ಲಿ ಲವ್ ಜಿಹಾದ್ ಮತ್ತು ಆಮಿಷದ ಮುಖಾಂತರ ಮೋಸದ ಮತಾಂತರ ಅವ್ಯಾಹತವಾಗಿ ನಡೆಯುತ್ತಿದ್ದು ರಾಜ್ಯ ಕಾಂಗ್ರೆಸ್ ಸರಕಾರ ಮತಾಂತರContinue reading “ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್ ಪಡೆದ ರಾಜ್ಯ ಕಾಂಗ್ರೆಸ್ ಸರಕಾರದ ಹಿಂದೂ ವಿರೋಧಿ ನೀತಿ ಖಂಡನೀಯ: ವೀಣಾ ಎಸ್. ಶೆಟ್ಟಿ”

ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ

ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ನೂತನ ಸಚಿವರಾದ ಶ್ರೀ ಮಂಕಾಳ ಎಸ್. ವೈದ್ಯ ಅವರಿಗೆ ಇಂದು ದಿನಾಂಕ 16-06-2023 ರಂದು ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಸಮಸ್ತ ಮೀನುಗಾರರ ವತಿಯಿಂದ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನೂತನ ಸಚಿವರಿಗೆ ಅಭಿನಂದನೆ ಸಲ್ಲಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಹೆಜಮಾಡಿ ಬಂದರಿನ 60 ಶೇಕಡಾ ಕಾಮಗಾರಿ ಪೂರ್ಣಗೊಂಡಿದ್ದು ಬಾಕಿ ಉಳಿದ ಕಾಮಗಾರಿಗೆ ಅನುದಾನವನ್ನುContinue reading “ಸಮಸ್ತ ಮೀನುಗಾರರ ವತಿಯಿಂದ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಅಭಿನಂದನೆ – ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗಿ”

ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ

ಉಡುಪಿ: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ತಿಂಗಳೊಳಗೆ ಕಾಂಗ್ರೆಸ್ ನೇತೃತ್ವದ ರಿವರ್ಸ್ ಗೇರ್ ಸರಕಾರ ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿರುವುದು ಒಂದೆರಡು ವರ್ಗಗಳ ಓಲೈಕೆಯ ಸಹಿತ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಲವಂತದ ಮತಾಂತರ, ಆಮಿಷದ ಮತಾಂತರ ಇತ್ಯಾದಿಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಕಳೆದ ಅವಧಿಯಲ್ಲಿ ಮತಾಂತರ ನಿಷೇಧ ಕಾಯ್ದೆಗೆ ತಿದ್ದುಪಡಿContinue reading “ಮತಾಂತರ ನಿಷೇಧ ಕಾಯ್ದೆ ತಿದ್ದುಪಡಿ ವಾಪಸ್; ಕಾಂಗ್ರೆಸ್ಸಿನಿಂದ ಮತ ಬ್ಯಾಂಕ್ ಭದ್ರಪಡಿಸುವ ಹುನ್ನಾರ: ಕುಯಿಲಾಡಿ”

ಪ್ರಸ್ತುತ ರಾಜ್ಯ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ ಕೊಡುಗೆ; ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ಸಿನಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಹಾಸ್ಯಾಸ್ಪದ: ಕುಯಿಲಾಡಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ರಾಜ್ಯದ ಬಿಪಿಎಲ್ ಕುಟುಂಬಕ್ಕೆ ಪ್ರತೀ ತಿಂಗಳು 5 ಕೆ.ಜಿ. ಅಕ್ಕಿ ಮತ್ತು ಅಂತ್ಯೋದಯ ಕಾರ್ಡುದಾರರಿಗೆ ಮಾಸಿಕ 35 ಕೆ.ಜಿ. ಅಕ್ಕಿಯನ್ನು ಪಡಿತರ ಮೂಲಕ ಉಚಿತವಾಗಿ ವಿತರಿಸುತ್ತಿದೆ. ಆದರೆ ಕಾಂಗ್ರೆಸ್ ಸಹಿತ ಸಿ.ಎಂ. ಸಿದ್ದರಾಮಯ್ಯ ಎಲ್ಲಿಯೂ ಈ ವಿಚಾರವನ್ನು ಪ್ರಚುರಪಡಿಸದೆ ಸತ್ಯವನ್ನು ಮರೆಮಾಚುವ ಕೀಳು ಮನಸ್ಥಿತಿಯ ಮೂಲಕ ಬಡವರ ಅನ್ನದ ವಿಚಾರದಲ್ಲೂ ಹೊಲಸು ರಾಜಕೀಯವನ್ನು ಪ್ರದರ್ಶಿಸಿದೆ. ಕೇವಲ ಅಧಿಕಾರಕ್ಕೇರುವ ಸ್ವಯಂ ಸ್ವಾರ್ಥ ಸಾಧನೆಗಾಗಿContinue reading “ಪ್ರಸ್ತುತ ರಾಜ್ಯ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಕೇಂದ್ರ ಸರಕಾರದ ಕೊಡುಗೆ; ಗ್ಯಾರಂಟಿ ವಿಚಾರದಲ್ಲಿ ಜನತೆಗೆ ಮೋಸ ಎಸಗಿರುವ ಕಾಂಗ್ರೆಸ್ಸಿನಿಂದ ಕೇಂದ್ರದ ಮೇಲೆ ಗೂಬೆ ಕೂರಿಸುವ ಯತ್ನ ಹಾಸ್ಯಾಸ್ಪದ: ಕುಯಿಲಾಡಿ”

ಚುನಾವಣಾ ಅವಲೋಕನದ ಜೊತೆಗೆ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸೋಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ

ಉಡುಪಿ: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಸೋತಿದ್ದರೂ ಉಡುಪಿ ಜಿಲ್ಲೆಯಲ್ಲಿ ಐದೂ ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲೇ ಮುಂಚೂಣಿ ಸ್ಥಾನ ಪಡೆದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಮಸ್ತ ಕಾರ್ಯಕರ್ತರ ಸಾಧನೆ ಅಭಿನಂದನೀಯ. ಪ್ರಸಕ್ತ ಚುನಾವಣೆಯ ಅವಲೋಕನದ ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತರಾಗಿ ಶ್ರಮಿಸೋಣ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ಚುನಾವಣಾ ಅವಲೋಕನದ ಜೊತೆಗೆ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಶ್ರಮಿಸೋಣ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ”

ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ

ಕಾಪು: ಇತ್ತೀಚೆಗೆ ಉದ್ಯಾವರದ ಬೊಳ್ಜೆ ಪರಿಸರದಲ್ಲಿ ಬಿಜೆಪಿ ಕಾರ್ಯಕರ್ತ ರಕ್ಷಿತ್ ಸಾಲಿಯಾನ್ ಇವರ ಮೇಲೆ ಅಪರಿಚಿತರಾದ ಮೂರು ಜನ ಬಂದು ಮಾರಕಾಯುಧಗಳಿಂದ ಹಲ್ಲೆ ಮಾಡಲು ಯತ್ನಿಸಿದ ಘಟನೆ ಖಂಡನೀಯವಾದುದು. ಈ ಕುರಿತಂತೆ ಕಾಪು ಪೋಲಿಸ್ ಠಾಣೆಯುಲ್ಲಿ ದೂರು ದಾಖಲಾಗಿದ್ದು ಈ ಕುರಿತಂತೆ ಪೋಲೀಸರು ವಿಚಾರಣೆ ನಡೆಸಲು ಪ್ರಾರಂಭಿಸಿ ಈ ಹಿಂದೆ ಹಲವಾರು ದರೋಡೆ, ಕಳ್ಳತನ ಕೊಲೆ ಇತ್ಯಾದಿ ಆರೋಪಗಳ ಮೇಲೆ ದೂರು ದಾಖಲಾದ ಜಾಮೀನಿನ ಮೇಲೆ ತಿರುಗಾಡುತ್ತಿರುವ ವಾದಿರಾಜ, ಅಭಿಶೇಕ್, ಮತ್ತು ರಂಜಿತ್ ಎಂಬವರು ಈ‌ ಕ್ರತ್ಯContinue reading “ಉದ್ಯಾವರ ರಕ್ಷಿತ್ ಕೋಟ್ಯನ್ ಮೇಲೆ ಹಲ್ಲೆ ನಡೆಸಿದ ಆರೋಪಿ ನಿತಿನ್ ಸಾಲಿಯಾನ್ ರವರನ್ನು ಬಂಧಿಸಲು ಆಗ್ರಹ”

Design a site like this with WordPress.com
Get started