ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ 2023-24ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ರಾಜ್ಯದ ಅಭಿವೃದ್ಧಿಯ ಬಗ್ಗೆ ಯಾವುದೇ ಯೋಜನೆಗಳಿಲ್ಲದೆ, ಕೇವಲ ಕಾಂಗ್ರೆಸ್ ಅಧಿಕಾರಕ್ಕೆ ಬರಲೆಂದೇ ಘೋಷಿಸಿದ್ದ ನಕಲಿ ಗ್ಯಾರಂಟಿಗಳಿಗಾಗಿ, ರಾಜ್ಯದ ಹಿತ ಮರೆತು ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳುವ ನಿರಾಶಾದಾಯಕ ಚುನಾವಣಾ ಗಿಮಿಕ್ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಬಜೆಟ್ ನಲ್ಲಿ ವಾಹನ, ಅಬಕಾರಿ, ಮುದ್ರಾಂಕ ತೆರಿಗೆಗಳನ್ನು ಹೆಚ್ಚಿಸಿರುವುದು ಎಲ್ಲಾ ವರ್ಗದ ಜನತೆಗೆ ದೊಡ್ಡ ಹೊಡೆತ ನೀಡಲಿದೆ. ನೂತನContinue reading “ಅಭಿವೃದ್ಧಿ ಯೋಜನೆ ರಹಿತ; ಸಾಲ ಸಹಿತ ನಕಲಿ ಗ್ಯಾರಂಟಿಯ ಬಜೆಟ್ : ಕುಯಿಲಾಡಿ”
Daily Archives: July 7, 2023
ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್ಕುಮಾರ್ ಕಟೀಲ್
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಒಂದು ರೀತಿ ಪ್ರತೀಕಾರದ ಬಜೆಟ್. ಈ ಬಜೆಟ್ ರಾಜ್ಯ ಸರಕಾರದ್ದೇ ಆದರೂ ಕೇಂದ್ರ ಬಿಜೆಪಿ ಸರಕಾರವನ್ನು ಗುರಿ ಮಾಡಿರುವುದು ಕಂಡುಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಟೀಕಿಸಿದ್ದಾರೆ. ಇದೊಂದು ನಿರಾಶಾದಾಯಕ, ಪ್ರಗತಿಹೀನ ಬಜೆಟ್ ಎಂದಿರುವ ಅವರು, ಬಜೆಟ್ ಮಂಡಿಸುವ ವೇಳೆ ಕೇಂದ್ರ ಸರಕಾರ, ಮೋದಿಜಿ ಅವರನ್ನು ಟೀಕಿಸುವುದಕ್ಕಾಗಿಯೇ ಈ ಅವಕಾಶವನ್ನು ಉಪಯೋಗ ಮಾಡಿಕೊಂಡಿದ್ದಾರೆ. ರಾಜ್ಯಗಳ ಒಕ್ಕೂಟದ ಒಳಗಡೆ ಕೇಂದ್ರದ ಜೊತೆ ಸಂಘರ್ಷ,Continue reading “ಪ್ರತೀಕಾರದ, ಪ್ರಗತಿಹೀನ ಬಜೆಟ್: ನಳಿನ್ಕುಮಾರ್ ಕಟೀಲ್”