
ಕಾಪು: ನರೇಂದ್ರ ಮೋದೀಜಿ ಸರಕಾರ ಒಂಭತ್ತು ವರ್ಷ ಪೂರೈಸಿದ ಸಂದರ್ಭದಲ್ಲಿ ಸರಕಾರದ ಸಾಧನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಈ ಕುರಿತಂತೆ ವಿವಿಧ ಕಾರ್ಯಕ್ರಮಗಳನ್ನು ನಡೆಸುವ ಬಗ್ಗೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಾಯಿತು. ಈಕಾರ್ಯಕ್ರಮಗಳ ಜಿಲ್ಲಾ ಉಸ್ತುವಾರಿ ವೀಣಾ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಮಂಡಲ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ರಾವ್, ಹಿರಿಯರಾದ ಶೀಲಾ ಕೆ ಶೆಟ್ಟಿ ಉಪಸ್ಥಿತರಿದ್ದರು. ಪಕ್ಷದ ವಿವಿಧ ಜವಾಬ್ದಾರಿ ಹೊತ್ತಿರುವ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಶ್ರೀಕಾಂತ ನಾಯಕ್
ಅಧ್ಯಕ್ಷರು ಬಿಜೆಪಿ ಕಾಪು ಕ್ಷೇತ್ರ