
ಉಡುಪಿ: ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವಿದ್ಯಾಕುಮಾರಿ.ಕೆ. ಅವರನ್ನು ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ. ಈ ಹಿಂದೆ ಇದ್ದ ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಕೂರ್ಮ ರಾವ್ ಎಂ. ಅವರಿಗೆ ವರ್ಗಾವಣೆ ನೀಡವಲಾಗಿದೆ.
ತುಮಕೂರಿನಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ವಿದ್ಯಾಕುಮಾರಿ.ಕೆ ಅವರು ಈ ಹಿಂದೆ ಉಡುಪಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದವರು, ಇದೀಗ ಸರಕಾರದ ಆದೇಶದ ಮೇರೆಗೆ ಜಿಲ್ಲಾಧಿಕಾರಿಯಾಗಿ ನೇಮಕವಾಗಿದ್ದಾರೆ.