ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಆಯ್ಕೆ


ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ 2023-25ನೇ ಸಾಲಿನ ಆಡಳಿತ ಸಮಿತಿಯ ನೂತನ ಅಧ್ಯಕ್ಷರಾಗಿ ಎ.ಶಿವಕುಮಾರ್ ಅಂಬಲಪಾಡಿ ಇವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು, ಉಪಾಧ್ಯಕ್ಷರಾಗಿ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್, ಕೋಶಾಧಿಕಾರಿಯಾಗಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾಗಿ ಮಹೇಂದ್ರ ಕೋಟ್ಯಾನ್ ಮತ್ತು ಅವಿನಾಶ್ ಪೂಜಾರಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಆಡಳಿತ ಸಮಿತಿಯ ಸದಸ್ಯರಾಗಿ ಎ.ಮುದ್ದಣ್ಣ ಪೂಜಾರಿ, ಸುಧಾಕರ್ ಎ., ರಾಜೇಂದ್ರ ಪಂದುಬೆಟ್ಟು, ಭಾಸ್ಕರ ಅಂಚನ್, ಸತೀಶ್ ಪೂಜಾರಿ, ಗುರುರಾಜ್ ಪೂಜಾರಿ, ಭಾಸ್ಕರ ಕೋಟ್ಯಾನ್, ವಿನಯ್ ಕುಮಾರ್, ಚೆನ್ನಕೇಶವ, ನಿತಿನ್ ಕುಮಾರ್, ವಿನೋದ್ ಪೂಜಾರಿ, ಜನಾರ್ದನ ಪೂಜಾರಿ, ಗೋದಾವರಿ ಎಮ್. ಸುವರ್ಣ ಮತ್ತು ವಾಣಿಶ್ರೀ ಅರುಣ್ ಕುಮಾರ್ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಸಂಘದ ಗೌರವ ಸದಸ್ಯರಾಗಿ ಎ.ಭಾಸ್ಕರ ಪೂಜಾರಿ, ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಮಹಾಬಲ ಪೂಜಾರಿ, ಎ.ಸಂಜೀವ ಪೂಜಾರಿ; ಭಜನಾ ಸಂಚಾಲಕರಾಗಿ ಕೆ.ಮಂಜಪ್ಪ ಸುವರ್ಣ, ಭಜನಾ ಸಹ ಸಂಚಾಲಕರಾಗಿ ಎ.ಮಾಧವ ಪೂಜಾರಿ ಮತ್ತು ಶಂಕರ ಪೂಜಾರಿ; ಅರ್ಚಕರಾಗಿ ಅವಿನಾಶ್ ಪೂಜಾರಿ, ಜೀವನ್ ಮತ್ತು ಅದಿತ್; ಗೌರವ ಲೆಕ್ಕ ಪರಿಶೋಧಕರಾಗಿ ಗಣೇಶ್ ಹೆಬ್ಬಾರ್ ಸಿ.ಎ., ಅಂಬಲಪಾಡಿ ಇವರು ಮರು ಆಯ್ಕೆಯಾಗಿದ್ದಾರೆ.

ಆ.13ರಂದು ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯಲ್ಲಿ 2023-25ನೇ ಸಾಲಿನ ನೂತನ ಆಡಳಿತ ಸಮಿತಿಯ ಆಯ್ಕೆ ನಡೆದಿದೆ.

Leave a comment

Design a site like this with WordPress.com
Get started