ಉಡುಪಿ ಜಿಲ್ಲಾ ಬಿಜೆಪಿ: 77ನೇ ಸ್ವಾತಂತ್ರ್ಯ ದಿನಾಚರಣೆ; ಧ್ವಜಾರೋಹಣ



ಉಡುಪಿ: ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲಾ ಕಛೇರಿಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಧ್ವಜಾರೋಹಣಗೈದು ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದ ಹಿರಿಯರನ್ನು ಸ್ಮರಿಸಿದರು.

ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಸಭೆಯನ್ನುದ್ದೇಶಿಸಿ ಮಾತನಾಡಿ, ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಬಿ.ರವಿ ಅಮೀನ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಆತ್ರಾಡಿ ಸತ್ಯಾನಂದ ನಾಯಕ್, ಜಿಲ್ಲಾ ಕಾರ್ಯದರ್ಶಿಗಳಾದ ಗುರುಪ್ರಸಾದ್ ಶೆಟ್ಟಿ, ನಳಿನಿ ಪ್ರದೀಪ್ ರಾವ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು, ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಸಭಾ ಸದಸ್ಯರಾದ ಗಿರೀಶ್ ಎಮ್. ಅಂಚನ್, ರಜನಿ ಹೆಬ್ಬಾರ್, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ದಾವೂದ್ ಅಬೂಬಕರ್, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಷ್ಮಿತಾ ಬಿ. ಶೆಟ್ಟಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಸಾಮಾಜಿಕ ಜಾಲತಾಣ ವಿಭಾಗದ ಚಂದ್ರಶೇಖರ ಪ್ರಭು, ಅಕ್ಷಯ್ ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ನಗರ ಕಾರ್ಯದರ್ಶಿ ರಾಜೇಂದ್ರ ಪಂದುಬೆಟ್ಟು, ನಗರ ಯುವ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ, ದಿನಕರ ಪೂಜಾರಿ, ಜಯಪ್ರಕಾಶ್, ವಿನೋದ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started