

ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ಆಶ್ರಯದಲ್ಲಿ ಬಿಲ್ಲವ ಮಹಿಳಾ ಘಟಕ ಅಂಬಲಪಾಡಿ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಜಂಟಿ ಸಹಯೋಗದೊಂದಿಗೆ ಆಟಿಡೊಂಜಿ ಕೂಟ, ಹಿರಿಯ ಕೃಷಿಕ ಮಹಿಳೆಯರಿಗೆ ಸನ್ಮಾನ ಹಾಗೂ ಕೃಷಿ ಮತ್ತು ತೋಟಗಾರಿಕೆ ಕುರಿತು ಮಾಹಿತಿ ಕಾರ್ಯಕ್ರಮವು ಸಂಘದ ಶ್ರೀ ನಾರಾಯಣಗುರು ಸಮುದಾಯ ಭವನದಲ್ಲಿ ನಡೆಯಿತು.
ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಎ.ಶಿವಕುಮಾರ್ ಅಂಬಲಪಾಡಿ ಇವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹೇಮಂತ್ ಕುಮಾರ್ ರವರು ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ತೋಟಗಾರಿಕೆ ಬಗ್ಗೆ ಮಾಹಿತಿ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್ ರವರು ಆಟಿ ತಿಂಗಳ ಆಹಾರ ಪದ್ಧತಿ ಹಾಗೂ ಕೃಷಿಯ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ಕೃಷಿ ಚಟುವಟಿಕೆಗಳಲ್ಲಿ ಸುದೀರ್ಘ ಅವಧಿಗೆ ತೊಡಗಿಸಿಕೊಂಡಿದ್ದ ಸಂಘದ ಪರಿಸರದ ಸರೋಜಿನಿ ಪೂಜಾರ್ತಿ ಅಂಬಲಪಾಡಿ, ಜಾನಕಿ ಪೂಜಾರ್ತಿ ಅಂಬಲಪಾಡಿ ಮತ್ತು ಗಿರಿಜ ಪೂಜಾರ್ತಿ ಜತ್ತರಬೆಟ್ಟು ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಎನ್ಎಲ್ಆರ್ ಎಮ್ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಶಮಂತ್, ಜಯಮಾಲಾ, ತಾಲೂಕು ಸಂಪನ್ಮೂಲ ವ್ಯಕ್ತಿ ರಂಜಿತಾ, ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಗೌರವ ಸದಸ್ಯರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಸಂಘದ ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಅಶ್ವಿನಿ, ಸಂಚಲ ಶಶಿಕಾಂತ್, ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಸಂತೋಷ್, ಉಪಾಧ್ಯಕ್ಷೆ ಉಷಾ ಕಿದಿಯೂರು, ಕಾರ್ಯದರ್ಶಿ ಗೀತಾ ಹರೀಶ್ ಪಾಲನ್, ಎಂಬಿಕೆ ಪ್ರಮೀಳಾ ಶಶಿಕಾಂತ್, ಎಲ್ಸಿಆರ್ಪಿ ಇಂದಿರಾ ಪಾಂಡು, ಪುಷ್ಪಲತಾ ಹರೀಶ್, ಶಮಿತಾ, ಬಿಆರ್ಪಿವಿಪಿ ಪ್ರಮೀಳಾ ಸುಧಾಕರ್, ಪಶು ಸಖಿ ಸುಪ್ರಿತಾ ಮನೋಜ್ ಹಾಗೂ ಸಂಘದ ಆಡಳಿತ ಸಮಿತಿಯ ಸದಸ್ಯರು, ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.
ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಸದಸ್ಯರು, ವಿದ್ಯಾರ್ಥಿನಿಯರು ಮತ್ತು ಪುಟಾಣಿಗಳಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ನಡೆಯಿತು. ಆಟಿ ತಿಂಗಳ ವೈವಿಧ್ಯಮಯ ಖಾದ್ಯಗಳ ಸಹಿತ ಸಾಮೂಹಿಕ ಸಹ ಭೋಜನ ನಡೆಯಿತು.