
ಉಡುಪಿ: ಬಿಲ್ಲವ ಸೇವಾ ಸಂಘ(ರಿ.) ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ, ಸಂಘದ ಮಹಿಳಾ ಘಟಕ ಮತ್ತು ಉಜ್ವಲ ಸಂಜೀವಿನಿ ಒಕ್ಕೂಟ ಅಂಬಲಪಾಡಿ ಇದರ ಆಶ್ರಯದಲ್ಲಿ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಕೃಷಿ ಮತ್ತು ತೋಟಗಾರಿಕಾ ಮಾಹಿತಿ ಕಾರ್ಯಕ್ರಮದಲ್ಲಿ ಅಂಬಲಪಾಡಿ ಪರಿಸರದ ಹಿರಿಯ ಕೃಷಿಕ ಮಹಿಳೆಯರಾದ ಸರೋಜಿನಿ ಪೂಜಾರ್ತಿ, ಜಾನಕಿ ಪೂಜಾರ್ತಿ ಆಚಾರಿಗುಂಡಿ-ಬಂಕೇರಕಟ್ಟ ಮತ್ತು ಗಿರಿಜ ಪೂಜಾರ್ತಿ ಜತ್ತರಬೆಟ್ಟು ಅಂಬಲಪಾಡಿ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಮೋಹನ್ ರಾಜ್, ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹೇಮಂತ್ ಕುಮಾರ್, ಎನ್ಎಲ್ಆರ್ ಎಮ್ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಶಮಂತ್, ಜಯಮಾಲಾ, ತಾಲೂಕು ಸಂಪನ್ಮೂಲ ವ್ಯಕ್ತಿ ರಂಜಿತಾ, ಬಿಲ್ಲವ ಸೇವಾ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಗೌರವ ಸದಸ್ಯರಾದ ಕೆ.ಮಂಜಪ್ಪ ಸುವರ್ಣ, ಎ.ಮಾಧವ ಪೂಜಾರಿ, ಜತೆ ಕಾರ್ಯದರ್ಶಿಗಳಾದ ಮಹೇಂದ್ರ ಕೋಟ್ಯಾನ್, ಅವಿನಾಶ್ ಪೂಜಾರಿ, ಸಂಘದ ಮಹಿಳಾ ಘಟಕದ ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಜತೆ ಕಾರ್ಯದರ್ಶಿಗಳಾದ ಅಶ್ವಿನಿ, ಸಂಚಲ ಶಶಿಕಾಂತ್, ಉಜ್ವಲ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸವಿತಾ ಸಂತೋಷ್, ಉಪಾಧ್ಯಕ್ಷೆ ಉಷಾ ಕಿದಿಯೂರು, ಕಾರ್ಯದರ್ಶಿ ಗೀತಾ ಹರೀಶ್ ಪಾಲನ್, ಎಂಬಿಕೆ ಪ್ರಮೀಳಾ ಶಶಿಕಾಂತ್, ಎಲ್ಸಿಆರ್ಪಿ ಇಂದಿರಾ ಪಾಂಡು, ಪುಷ್ಪಲತಾ ಹರೀಶ್, ಶಮಿತಾ, ಬಿಆರ್ಪಿವಿಪಿ ಪ್ರಮೀಳಾ ಸುಧಾಕರ್, ಪಶು ಸಖಿ ಸುಪ್ರಿತಾ ಮನೋಜ್ ಹಾಗೂ ಸಂಘದ ಆಡಳಿತ ಸಮಿತಿಯ ಸದಸ್ಯರು, ಸಂಘದ ಮಹಿಳಾ ಘಟಕ, ಉಜ್ವಲ ಸಂಜೀವಿನಿ ಒಕ್ಕೂಟ ಮತ್ತು ಶ್ರೀ ಗುರು ಮಹಿಳಾ ಕುಣಿತ ಭಜನಾ ಮಂಡಳಿಯ ಪದಾಧಿಕಾರಿಗಳು, ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.