ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದವರ ಮೇಲೆ ಪೊಲೀಸ್ ಕೇಸ್ ದಾಖಲಿಸಲು ತೋರಿದ ಆಸಕ್ತಿ ಉಡುಪಿ ಪ್ರಕರಣದ ತನಿಖೆಯ ಬಗ್ಗೆ ಯಾಕಿಲ್ಲ? : ಕುಯಿಲಾಡಿಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ಮತ್ತು ವೀಣಾ ಎಸ್. ಶೆಟ್ಟಿ ಯವರ ಮೇಲೆ ಸುಮೋಟೋ ಕೇಸ್ ದಾಖಲು: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ

ಉಡುಪಿ: ದೇಶದಾದ್ಯಂತ ತೀವ್ರ ಖಂಡನೆಗೆ ಗುರಿಯಾಗಿರುವ ಉಡುಪಿಯ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಂದ ನಡೆದ ಹಿಂದೂ ವಿದ್ಯಾರ್ಥಿನಿಯ ಆಕ್ಷೇಪಾರ್ಹ ಖಾಸಗಿ ವೀಡಿಯೋ ಚಿತ್ರೀಕರಣ ಪ್ರಕರಣವನ್ನು ಖಂಡಿಸಿ ಉಡುಪಿಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಹಾಗೂ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳನ್ನು ಉದ್ದೇಶಿಸಿ ಮಾತನಾಡಿದ್ದ ವಿಶ್ವ ಹಿಂದೂ ಪರಿಷತ್ ರಾಜ್ಯ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ವಿಹಿಂಪ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಹಾಗೂ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾContinue reading “ಸಂವಿಧಾನಾತ್ಮಕವಾಗಿ ಪ್ರತಿಭಟಿಸಿದವರ ಮೇಲೆ ಪೊಲೀಸ್ ಕೇಸ್ ದಾಖಲಿಸಲು ತೋರಿದ ಆಸಕ್ತಿ ಉಡುಪಿ ಪ್ರಕರಣದ ತನಿಖೆಯ ಬಗ್ಗೆ ಯಾಕಿಲ್ಲ? : ಕುಯಿಲಾಡಿಶರಣ್ ಪಂಪ್ವೆಲ್, ದಿನೇಶ್ ಮೆಂಡನ್ ಮತ್ತು ವೀಣಾ ಎಸ್. ಶೆಟ್ಟಿ ಯವರ ಮೇಲೆ ಸುಮೋಟೋ ಕೇಸ್ ದಾಖಲು: ಉಡುಪಿ ಜಿಲ್ಲಾ ಬಿಜೆಪಿ ಖಂಡನೆ”

ಅಲೆವೂರು ಪಂಚಾಯತ್ ನ‌ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಐಹೊಳೆ ಪಂಚಾಯತ್ ಅಧ್ಯಕ್ಷ – ಅಭಿನಂದಿಸಿದ ಶ್ರೀಕಾಂತ ನಾಯಕ್

ಕಾಪು: ಕಳೆದ ಸುಮಾರು 7-8 ವರ್ಷದ ಹಿಂದೆ ಅಲೆವೂರು ಪಂಚಾಯತ್ ವ್ಯಾಪ್ತಿಯ ಮನೆ ಮನೆಯ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಇತಿಹಾಸ ಪ್ರಸಿಧ್ದ ಐಹೊಳೆ ಪಂಚಾಯತ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದು ಅಲೆವೂರು ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಅಭಿನಂದಿಸಿದ್ದಾರೆ. ಅಲೆವೂರಿನ ಹಲವಾರು ವರ್ಷಗಳ ನಿವಾಸಿಯಾದ ಇವರು ಕಷ್ಟ ಪಟ್ಟು‌ ದುಡಿದು ನಂತರದಲ್ಲಿ ಉಡುಪಿಯ ನಿವಾಸಿಯಾಗಿದ್ದರು. ಕಳೆದ ಬಾರಿ ನಡೆದ ಪಂಚಾಯತ್ ಚುನಾವಣೆಯಲ್ಲಿ ತನ್ನ ಮೂಲ ಊರಾದ ಐಹೊಳೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿContinue reading “ಅಲೆವೂರು ಪಂಚಾಯತ್ ನ‌ ತ್ಯಾಜ್ಯ ಸಂಗ್ರಹ ಮಾಡುತ್ತಿದ್ದ ಹನುಮಂತ ಆಡಿನ್ ಇದೀಗ ಐಹೊಳೆ ಪಂಚಾಯತ್ ಅಧ್ಯಕ್ಷ – ಅಭಿನಂದಿಸಿದ ಶ್ರೀಕಾಂತ ನಾಯಕ್”

ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ದೋಖಾ: ಛಲವಾದಿ ನಾರಾಯಣಸ್ವಾಮಿ ಟೀಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರವು ದಲಿತರಿಗೆ ದೋಖಾ ಮಾಡುವ ಸರಕಾರ ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಈ ಕುರಿತು ಪತ್ರಿಕಾಹೇಳಿಕೆ ನೀಡಿರುವ ಅವರು, ಗ್ಯಾರಂಟಿ ಯೋಜನೆಗಳಿಗಾಗಿ ಎಸ್.ಸಿ.ಎಸ್.ಪಿ.-ಟಿ.ಎಸ್.ಪಿ.ಯ 11 ಸಾವಿರ ಕೋಟಿ ರೂಪಾಯಿಯನ್ನು ಬಳಸುತ್ತಿರುವುದಾಗಿ ರಾಜ್ಯದ ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಅವರೇ ಒಪ್ಪಿಕೊಂಡಿದ್ದಾರೆ. ಇದು ದಲಿತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯರು ಮತ್ತು ಸಮಾಜ ಕಲ್ಯಾಣ ಸಚಿವರು ಮಾಡುತ್ತಿರುವ ಮಹಾಮೋಸ ಎಂದು ಟೀಕಿಸಿದ್ದಾರೆ.Continue reading “ರಾಜ್ಯದ ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ದೋಖಾ: ಛಲವಾದಿ ನಾರಾಯಣಸ್ವಾಮಿ ಟೀಕೆ”

Design a site like this with WordPress.com
Get started