ಬಿಜೆಪಿ ಅಂಬಲಪಾಡಿ ಬೂತ್ 178ರಲ್ಲಿ ಪಂಡಿತ್ ದೀನದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ





ಉಡುಪಿ: ಭಾರತೀಯ ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಏಕಾತ್ಮ ಮಾನವತಾ ವಾದದ ಪ್ರತಿಪಾದಕರು, ಅಂತ್ಯೋದಯ ಪರಿಕಲ್ಪನೆಯನ್ನು ನಾಡಿಗೆ ನೀಡಿದ ಮಹಾನ್ ಚೇತನ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮ ದಿನಾಚರಣೆಯನ್ನು ಬಿಜೆಪಿ ಅಂಬಲಪಾಡಿ ಬೂತ್ 178ರ ವತಿಯಿಂದ ಬೂತ್ ಅಧ್ಯಕ್ಷ ಮಹೇಂದ್ರ ಕೋಟ್ಯಾನ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಯೋಗೀಶ್ ಶೆಟ್ಟಿಯವರ ನಿವಾಸದಲ್ಲಿ ಆಚರಿಸಲಾಯಿತು.

ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ತತ್ವಾದರ್ಶಗಳು ಮತ್ತು ಜೀವನ ಮೌಲ್ಯಗಳ ಬಗ್ಗೆ ಮಾಹಿತಿ ನೀಡಿ, ಪಂಡಿತ್ ಜೀ ಯವರ ಜೀವನಾದರ್ಶಗಳನ್ನು ಮೈಗೂಡಿಸಿಕೊಳ್ಳುವ ಜೊತೆಗೆ ಬೂತ್ ಮಟ್ಟದಲ್ಲಿ ಸದೃಢ ಪಕ್ಷ ಸಂಘಟನೆಗೆ ಕಂಕಣಬದ್ಧರಾಗಿ ಶ್ರಮಿಸೋಣ ಎಂದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಯೋಗೀಶ್ ಶೆಟ್ಟಿ, ಪ್ರಮುಖರಾದ ಶರತ್ ಶೆಟ್ಟಿ, ಅನಿಲ್ ರಾಜ್ ಅಂಚನ್, ವಿನೋದ್ ಪೂಜಾರಿ, ನಿತಿನ್ ಕುಮಾರ್, ಪ್ರವೀಣ್ ಶೆಟ್ಟಿ ಅಂಬಲಪಾಡಿ ಮುಂತಾದವರು ಉಪಸ್ಥಿತರಿದ್ದರು.

Leave a comment

Design a site like this with WordPress.com
Get started